<p><strong>ಮುಂಬೈ:</strong> ‘ದಿ ಕಾರವಾರ ಅರ್ಬನ್ ಕೋ–ಆಪರೇಟಿವ್ ಬ್ಯಾಂಕ್’ಗೆ ನೀಡಿದ್ದ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರದ್ದುಪಡಿಸಿದೆ. ಈ ಬ್ಯಾಂಕ್ನ ಬಳಿ ಅಗತ್ಯ ಬಂಡವಾಳ ಇಲ್ಲ, ಬ್ಯಾಂಕ್ನ ಗಳಿಕೆಯ ಸಾಧ್ಯತೆಯೂ ಚೆನ್ನಾಗಿಲ್ಲ ಎಂದು ಆರ್ಬಿಐ ಬುಧವಾರ ಹೇಳಿದೆ.</p>.<p>ಪರವಾನಗಿ ರದ್ದಾಗಿರುವುದರ ಪರಿಣಾಮ ಈ ಬ್ಯಾಂಕ್ನ ಕಾರ್ಯಗಳು ಬುಧವಾರದ ಅಂತ್ಯದ ನಂತರ ಸ್ಥಗಿತಗೊಳ್ಳಲಿವೆ.</p>.<p>ಈ ಬ್ಯಾಂಕ್ನ್ನು ಮುಚ್ಚುವ ಆದೇಶ ಹೊರಡಿಸುವಂತೆ ಕರ್ನಾಟಕದ ಸಹಕಾರ ಸಂಘಗಳ ರಿಜಿಸ್ಟ್ರಾರ್ಗೆ ಆರ್ಬಿಐ ಮನವಿ ಮಾಡಿದೆ. ಬ್ಯಾಂಕನ್ನು ಮುಚ್ಚುವ ಪ್ರಕ್ರಿಯೆಗಳನ್ನು ನೋಡಿಕೊಳ್ಳಲು ಅಧಿಕಾರಿಯನ್ನು (ಲಿಕ್ವಿಡೇಟರ್) ನೇಮಕ ಮಾಡುವಂತೆ ಹೇಳಿದೆ.</p>.<p class="title">ಬ್ಯಾಂಕ್ನ್ನು ಮುಚ್ಚುವ ಪ್ರಕ್ರಿಯೆ ಪೂರ್ಣಗೊಂಡ ನಂತರದಲ್ಲಿ, ಠೇವಣಿದಾರರಿಗೆ ₹5 ಲಕ್ಷದವರೆಗೆ ಠೇವಣಿ ವಿಮೆ ಸಿಗಲಿದೆ. ಬ್ಯಾಂಕ್ನ ಠೇವಣಿದಾರರ ಪೈಕಿ ಶೇ 92.9ರಷ್ಟು ಮಂದಿ ತಮ್ಮ ಠೇವಣಿಯ ಪೂರ್ಣ ಮೊತ್ತವನ್ನು ವಿಮಾ ಪರಿಹಾರದ ರೂಪದಲ್ಲಿ ಪಡೆಯಲು ಅರ್ಹರಿದ್ದಾರೆ ಎಂದು ಆರ್ಬಿಐ ಹೇಳಿದೆ.</p>.<p class="title">ಜೂನ್ 30ರವರೆಗಿನ ಮಾಹಿತಿ ಪ್ರಕಾರ, ವಿಮಾ ವ್ಯಾಪ್ತಿಯಲ್ಲಿ ಇರುವ ಠೇವಣಿಗಳ ಪೈಕಿ ₹37.79 ಕೋಟಿಯಷ್ಟನ್ನು ಪಾವತಿ ಮಾಡಿ ಆಗಿದೆ.</p>.<p class="title">ಈ ಬ್ಯಾಂಕ್ನ ಕಾರ್ಯಾಚರಣೆಗಳು ಮುಂದುವರಿಯಲು ಅವಕಾಶ ಮಾಡಿಕೊಡುವುದು ಠೇವಣಿದಾರರ ಹಿತಾಸಕ್ತಿಗೆ ವಿರುದ್ಧವಾದುದು ಎಂದು ಆರ್ಬಿಐ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ದಿ ಕಾರವಾರ ಅರ್ಬನ್ ಕೋ–ಆಪರೇಟಿವ್ ಬ್ಯಾಂಕ್’ಗೆ ನೀಡಿದ್ದ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರದ್ದುಪಡಿಸಿದೆ. ಈ ಬ್ಯಾಂಕ್ನ ಬಳಿ ಅಗತ್ಯ ಬಂಡವಾಳ ಇಲ್ಲ, ಬ್ಯಾಂಕ್ನ ಗಳಿಕೆಯ ಸಾಧ್ಯತೆಯೂ ಚೆನ್ನಾಗಿಲ್ಲ ಎಂದು ಆರ್ಬಿಐ ಬುಧವಾರ ಹೇಳಿದೆ.</p>.<p>ಪರವಾನಗಿ ರದ್ದಾಗಿರುವುದರ ಪರಿಣಾಮ ಈ ಬ್ಯಾಂಕ್ನ ಕಾರ್ಯಗಳು ಬುಧವಾರದ ಅಂತ್ಯದ ನಂತರ ಸ್ಥಗಿತಗೊಳ್ಳಲಿವೆ.</p>.<p>ಈ ಬ್ಯಾಂಕ್ನ್ನು ಮುಚ್ಚುವ ಆದೇಶ ಹೊರಡಿಸುವಂತೆ ಕರ್ನಾಟಕದ ಸಹಕಾರ ಸಂಘಗಳ ರಿಜಿಸ್ಟ್ರಾರ್ಗೆ ಆರ್ಬಿಐ ಮನವಿ ಮಾಡಿದೆ. ಬ್ಯಾಂಕನ್ನು ಮುಚ್ಚುವ ಪ್ರಕ್ರಿಯೆಗಳನ್ನು ನೋಡಿಕೊಳ್ಳಲು ಅಧಿಕಾರಿಯನ್ನು (ಲಿಕ್ವಿಡೇಟರ್) ನೇಮಕ ಮಾಡುವಂತೆ ಹೇಳಿದೆ.</p>.<p class="title">ಬ್ಯಾಂಕ್ನ್ನು ಮುಚ್ಚುವ ಪ್ರಕ್ರಿಯೆ ಪೂರ್ಣಗೊಂಡ ನಂತರದಲ್ಲಿ, ಠೇವಣಿದಾರರಿಗೆ ₹5 ಲಕ್ಷದವರೆಗೆ ಠೇವಣಿ ವಿಮೆ ಸಿಗಲಿದೆ. ಬ್ಯಾಂಕ್ನ ಠೇವಣಿದಾರರ ಪೈಕಿ ಶೇ 92.9ರಷ್ಟು ಮಂದಿ ತಮ್ಮ ಠೇವಣಿಯ ಪೂರ್ಣ ಮೊತ್ತವನ್ನು ವಿಮಾ ಪರಿಹಾರದ ರೂಪದಲ್ಲಿ ಪಡೆಯಲು ಅರ್ಹರಿದ್ದಾರೆ ಎಂದು ಆರ್ಬಿಐ ಹೇಳಿದೆ.</p>.<p class="title">ಜೂನ್ 30ರವರೆಗಿನ ಮಾಹಿತಿ ಪ್ರಕಾರ, ವಿಮಾ ವ್ಯಾಪ್ತಿಯಲ್ಲಿ ಇರುವ ಠೇವಣಿಗಳ ಪೈಕಿ ₹37.79 ಕೋಟಿಯಷ್ಟನ್ನು ಪಾವತಿ ಮಾಡಿ ಆಗಿದೆ.</p>.<p class="title">ಈ ಬ್ಯಾಂಕ್ನ ಕಾರ್ಯಾಚರಣೆಗಳು ಮುಂದುವರಿಯಲು ಅವಕಾಶ ಮಾಡಿಕೊಡುವುದು ಠೇವಣಿದಾರರ ಹಿತಾಸಕ್ತಿಗೆ ವಿರುದ್ಧವಾದುದು ಎಂದು ಆರ್ಬಿಐ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>