<p><strong>ನವದೆಹಲಿ:</strong> ದುರ್ಬಲ ಆರ್ಥಿಕತೆಯ ಕಾರಣಕ್ಕೆ ಮಹಾರಾಷ್ಟ್ರ ಮೂಲದ ‘ದಿ ಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ನ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗುರುವಾರ ರದ್ದುಗೊಳಿಸಿದೆ.</p>.<p>ಪರಿಣಾಮವಾಗಿ, ಸೆಪ್ಟೆಂಬರ್ 22ರಿಂದ ಜಾರಿಗೆ ಬರುವಂತೆ ಬ್ಯಾಂಕ್ನ ಬ್ಯಾಂಕಿಂಗ್ ವ್ಯವಹಾರಗಳನ್ನು ನಿಷೇಧಗೊಳ್ಳಲಿವೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಬ್ಯಾಂಕ್ ಅನ್ನು ಮುಚ್ಚಲು ಆದೇಶಿಸಬೇಕು ಮತ್ತು ಬ್ಯಾಂಕ್ಗೆ ಬರಖಾಸ್ತುದಾರರನ್ನು (ಲಿಕ್ವಿಡೇಟರ್– ಸಂಸ್ಥೆಯೊಂದರ ಮುಕ್ತಾಯ ಪ್ರಕ್ರಿಯೆ ನಡೆಸುವವರು) ನೇಮಿಸುವಂತೆ ಮಹಾರಾಷ್ಟ್ರ ಸಹಕಾರ ಇಲಾಖೆ ಆಯುಕ್ತ ಮತ್ತು ಸಹಕಾರ ಸಂಘಗಳ ರಿಜಿಸ್ಟ್ರಾರ್ ಮನವಿ ಮಾಡಿದ್ದಾರೆ ಎಂದು ಆರ್ಬಿಐ ತಿಳಿಸಿದೆ.</p>.<p>ಬ್ಯಾಂಕ್ ಬಳಿ ಸಾಕಷ್ಟು ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಗಳಿಲ್ಲದ ಕಾರಣ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಬ್ಯಾಂಕನ್ನು ಮುಂದುವರಿಸಿದರೆ ಅದರ ಠೇವಣಿದಾರರ ಹಿತಾಸಕ್ತಿಗಳಿಗೆ ಹಾನಿಯಾಗಲಿದೆ ಎಂದು ಆರ್ಬಿಐ ಹೇಳಿದೆ.</p>.<p>ಕೆಟ್ಟ ಆರ್ಥಿಕ ಸ್ಥಿತಿ ಹೊಂದಿರುವ ಬ್ಯಾಂಕ್ ತನ್ನ ಠೇವಣಿದಾರರಿಗೆ ಪೂರ್ಣವಾಗಿ ಪಾವತಿಸಲು ಸಾಧ್ಯವಿಲ್ಲ. ಬ್ಯಾಂಕ್ ತನ್ನ ಬ್ಯಾಂಕಿಂಗ್ ವ್ಯವಹಾರವನ್ನು ಮುಂದುವರಿಸಲು ಅನುಮತಿಸಿದರೆ ಸಾರ್ವಜನಿಕ ಹಿತಾಸಕ್ತಿ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ಆರ್ಬಿಐ ಹೇಳಿದೆ.</p>.<p>ಪರವಾನಗಿಯನ್ನು ರದ್ದುಗೊಳಿಸಿದ ಪರಿಣಾಮವಾಗಿ, ಬ್ಯಾಂಕ್ನ ಬ್ಯಾಂಕಿಂಗ್ ವ್ಯವಹಾರಗಳು ತಕ್ಷಣದಿಂದಲೇ ನಿಷೇಧಗೊಳ್ಳುತ್ತವೆ.</p>.<p>ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮದ ನಿಯಮದಂತೆ ಠೇವಣಿದಾರರು ₹5 ಲಕ್ಷಗಳ ವರೆಗೆ ಹಣ ಪಡೆಯಬಹುದಾಗಿದೆ. ಬ್ಯಾಂಕ್ ಸಲ್ಲಿಸಿರುವ ಮಾಹಿತಿಯ ಪ್ರಕಾರ, ಸುಮಾರು ಶೇ 99 ಠೇವಣಿದಾರರು ತಮ್ಮ ಠೇವಣಿಗಳ ಸಂಪೂರ್ಣ ಮೊತ್ತವನ್ನು ಡಿಐಸಿಜಿಸಿಯಿಂದ ಪಡೆಯಲು ಅರ್ಹರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದುರ್ಬಲ ಆರ್ಥಿಕತೆಯ ಕಾರಣಕ್ಕೆ ಮಹಾರಾಷ್ಟ್ರ ಮೂಲದ ‘ದಿ ಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ನ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗುರುವಾರ ರದ್ದುಗೊಳಿಸಿದೆ.</p>.<p>ಪರಿಣಾಮವಾಗಿ, ಸೆಪ್ಟೆಂಬರ್ 22ರಿಂದ ಜಾರಿಗೆ ಬರುವಂತೆ ಬ್ಯಾಂಕ್ನ ಬ್ಯಾಂಕಿಂಗ್ ವ್ಯವಹಾರಗಳನ್ನು ನಿಷೇಧಗೊಳ್ಳಲಿವೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಬ್ಯಾಂಕ್ ಅನ್ನು ಮುಚ್ಚಲು ಆದೇಶಿಸಬೇಕು ಮತ್ತು ಬ್ಯಾಂಕ್ಗೆ ಬರಖಾಸ್ತುದಾರರನ್ನು (ಲಿಕ್ವಿಡೇಟರ್– ಸಂಸ್ಥೆಯೊಂದರ ಮುಕ್ತಾಯ ಪ್ರಕ್ರಿಯೆ ನಡೆಸುವವರು) ನೇಮಿಸುವಂತೆ ಮಹಾರಾಷ್ಟ್ರ ಸಹಕಾರ ಇಲಾಖೆ ಆಯುಕ್ತ ಮತ್ತು ಸಹಕಾರ ಸಂಘಗಳ ರಿಜಿಸ್ಟ್ರಾರ್ ಮನವಿ ಮಾಡಿದ್ದಾರೆ ಎಂದು ಆರ್ಬಿಐ ತಿಳಿಸಿದೆ.</p>.<p>ಬ್ಯಾಂಕ್ ಬಳಿ ಸಾಕಷ್ಟು ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಗಳಿಲ್ಲದ ಕಾರಣ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಬ್ಯಾಂಕನ್ನು ಮುಂದುವರಿಸಿದರೆ ಅದರ ಠೇವಣಿದಾರರ ಹಿತಾಸಕ್ತಿಗಳಿಗೆ ಹಾನಿಯಾಗಲಿದೆ ಎಂದು ಆರ್ಬಿಐ ಹೇಳಿದೆ.</p>.<p>ಕೆಟ್ಟ ಆರ್ಥಿಕ ಸ್ಥಿತಿ ಹೊಂದಿರುವ ಬ್ಯಾಂಕ್ ತನ್ನ ಠೇವಣಿದಾರರಿಗೆ ಪೂರ್ಣವಾಗಿ ಪಾವತಿಸಲು ಸಾಧ್ಯವಿಲ್ಲ. ಬ್ಯಾಂಕ್ ತನ್ನ ಬ್ಯಾಂಕಿಂಗ್ ವ್ಯವಹಾರವನ್ನು ಮುಂದುವರಿಸಲು ಅನುಮತಿಸಿದರೆ ಸಾರ್ವಜನಿಕ ಹಿತಾಸಕ್ತಿ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ಆರ್ಬಿಐ ಹೇಳಿದೆ.</p>.<p>ಪರವಾನಗಿಯನ್ನು ರದ್ದುಗೊಳಿಸಿದ ಪರಿಣಾಮವಾಗಿ, ಬ್ಯಾಂಕ್ನ ಬ್ಯಾಂಕಿಂಗ್ ವ್ಯವಹಾರಗಳು ತಕ್ಷಣದಿಂದಲೇ ನಿಷೇಧಗೊಳ್ಳುತ್ತವೆ.</p>.<p>ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮದ ನಿಯಮದಂತೆ ಠೇವಣಿದಾರರು ₹5 ಲಕ್ಷಗಳ ವರೆಗೆ ಹಣ ಪಡೆಯಬಹುದಾಗಿದೆ. ಬ್ಯಾಂಕ್ ಸಲ್ಲಿಸಿರುವ ಮಾಹಿತಿಯ ಪ್ರಕಾರ, ಸುಮಾರು ಶೇ 99 ಠೇವಣಿದಾರರು ತಮ್ಮ ಠೇವಣಿಗಳ ಸಂಪೂರ್ಣ ಮೊತ್ತವನ್ನು ಡಿಐಸಿಜಿಸಿಯಿಂದ ಪಡೆಯಲು ಅರ್ಹರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>