ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ನಡುವಣ ಬಿಕ್ಕಟ್ಟು ಉಲ್ಬಣಿಸಿರುವ ಬೆನ್ನಲ್ಲೇ ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರಿಗೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬ್ಯಾಂಕ್ಗಳಲ್ಲಿ ₹50 ಕೋಟಿ ಮತ್ತು ಅದಕ್ಕಿಂತ ಹೆಚ್ಚು ಸಾಲಪಡೆದವರ ವಿವರಗಳನ್ನು ಬಹಿರಂಗಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದರೂ ಅದನ್ನು ನೀಡಲು ನಿರಾಕರಿಸಿದ ಕಾರಣ ‘ನಿಮ್ಮ ಮೇಲೆ ಗರಿಷ್ಠ ದಂಡವನ್ನು ಏಕೆ ವಿಧಿಸಬಾರದು’ ಎಂದು ಕಾರಣ ಕೇಳಿ ಈ ನೋಟಿಸ್ ನೀಡಿದೆ.
ಆರ್ಬಿಐ ನಿವೃತ್ತ ಗವರ್ನರ್ ರಘುರಾಂ ರಾಜನ್ ಅವರು ಅನುತ್ಪಾದಕ ಸಾಲಕ್ಕೆ ಸಂಬಂಧಿಸಿ ಬರೆದಿರುವ ಪತ್ರವನ್ನು ಬಹಿರಂಗಗೊಳಿಸುವಂತೆಯೂ ಪ್ರಧಾನಿ ಕಾರ್ಯಾಲಯ, ಹಣಕಾಸು ಸಚಿವಾಲಯ ಮತ್ತು ಸಿಐಸಿ ಸೂಚಿಸಿದೆ.