ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ಡಿದರ ಕಡಿತದ ಲಾಭ ಜನರಿಗೇಕೆ ಸಿಕ್ಕಿಲ್ಲ: ‘ಸುಪ್ರೀಂ’

Last Updated 9 ಅಕ್ಟೋಬರ್ 2018, 18:54 IST
ಅಕ್ಷರ ಗಾತ್ರ

ನವದೆಹಲಿ: ಬಡ್ಡಿದರ ಕಡಿತದ ಲಾಭವನ್ನುಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ವರ್ಗಾಯಿಸದಿರಲು ಕಾರಣವೇನು ಎಂದು ಸುಪ್ರೀಂ ಕೋರ್ಟ್, ಭಾರತೀಯ ರಿಸರ್ವ್‌ ಬ್ಯಾಂಕ್‌ ಅನ್ನು (ಆರ್‌ಬಿಐ) ಪ್ರಶ್ನಿಸಿದೆ.

ಬದಲಾಗುವ ಬಡ್ಡಿದರದಲ್ಲಿ ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಬಡ್ಡಿದರ ಕಡಿತದ ಲಾಭವನ್ನು ವರ್ಗಾಯಿಸುತ್ತಿಲ್ಲ ಎಂದು ಆರೋಪಿಸಿ ಮನಿಲೈಫ್‌ ಫೌಂಡೇಶನ್‌ ಎಂಬ ಸಂಸ್ಥೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಸಿತ್ತು.

ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆ ಸಭೆಯಲ್ಲಿ ಆರ್‌ಬಿಐ ರೆಪೊ ದರವನ್ನು ನಿಗದಿ ಮಾಡುತ್ತದೆ. ಅದರ ಮೇಲೆ ಗೃಹಸಾಲ, ವಾಹನ ಸಾಲಗಳ ಮೇಲಿನ ಬಡ್ಡಿದರಗಳು ನಿರ್ಧಾರವಾಗುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT