ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರೀಕ್ಷೆಗಿಂತ ವೇಗವಾಗಿ ಆರ್ಥಿಕ ಚೇತರಿಕೆ: ಶಕ್ತಿಕಾಂತ ದಾಸ್

Last Updated 26 ನವೆಂಬರ್ 2020, 16:39 IST
ಅಕ್ಷರ ಗಾತ್ರ

ಮುಂಬೈ: ದೇಶದ ಅರ್ಥ ವ್ಯವಸ್ಥೆಯು ನಿರೀಕ್ಷೆಗಿಂತಲೂ ಹೆಚ್ಚು ವೇಗವಾಗಿ ಚೇತರಿಕೆ ಕಂಡಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಆದರೆ, ಹಬ್ಬಗಳ ಸಂದರ್ಭದ ಖರೀದಿ ಭರಾಟೆ ಮುಗಿದ ನಂತರ ಮಾರುಕಟ್ಟೆಯಲ್ಲಿ ಬೇಡಿಕೆಯು ಎಷ್ಟು ಸ್ಥಿರವಾಗಿ ಇರುತ್ತದೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಅರ್ಥ ವ್ಯವಸ್ಥೆಯು ಶೇಕಡ (–)23.9ರಷ್ಟು ಕುಸಿತ ಕಂಡಿದೆ. ಇಡೀ ಹಣಕಾಸು ವರ್ಷ ದಲ್ಲಿ ಜಿಡಿಪಿಯು ಶೇಕಡ (–)9.5ರಷ್ಟು ಕುಸಿತ ಕಾಣಲಿದೆ ಎಂದು ಆರ್‌ಬಿಐ ಅಂದಾಜಿಸಿದೆ. ಅರ್ಥ ವ್ಯವಸ್ಥೆಯಲ್ಲಿ ಸುಧಾರಣೆ ಕಂಡುಬಂದಿದ್ದರೂ, ಕೊರೊನಾ ಸೋಂಕು ಯುರೋಪಿನ ಕೆಲವು ಕಡೆ ಗಳಲ್ಲಿ ಹಾಗೂ ಭಾರತದ ಕೆಲವು ಪ್ರದೇಶಗಳಲ್ಲಿ ಹೆಚ್ಚಾಗುತ್ತಿರುವುದು ಅರ್ಥ ವ್ಯವಸ್ಥೆಯ ಪಾಲಿಗೆ ಅಪಾಯಕಾರಿ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT