ಮುಂಬೈ: ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ನಡುವಣ ಬಿಕ್ಕಟ್ಟು ಉಲ್ಬಣಿಸಿರುವ ಬೆನ್ನಲ್ಲೇ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ಮತ್ತು ಸರ್ಕಾರದ ನಡುವೆ ಕಳೆದ ಕೆಲ ದಿನಗಳಿಂದ ಸರಿಪಡಿಸಲಾರದಂತಹ ಬಿಕ್ಕಟ್ಟು ಉದ್ಭವಿಸಿದೆ. ಪಟೇಲ್ ಅವರು ರಾಜೀನಾಮೆ ನೀಡುವ ಎಲ್ಲ ಸಾಧ್ಯತೆಗಳೂ ಮುಕ್ತವಾಗಿವೆ ಎಂದು ಸಿಎನ್ಬಿಸಿ ಟಿವಿ18 ವರದಿ ಮಾಡಿದೆ.
ಈ ಕುರಿತು ಆರ್ಬಿಐ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.