ಏಪ್ರಿಲ್ನಲ್ಲಿ ಚಿಲ್ಲರೆ ಹಣದುಬ್ಬರವು ಶೇ 5ಕ್ಕಿಂತಲೂ ಕೆಳಕ್ಕೆ ಇಳಿಕೆ ಕಂಡಿದ್ದು, ಮೇನಲ್ಲಿ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಇದೆ. ಹೀಗಾದಲ್ಲಿ, ಈ ಹಿಂದೆ ಬಡ್ಡಿದರದಲ್ಲಿ ಮಾಡಿರುವ ಏರಿಕೆಯು ಹಣದುಬ್ಬವರನ್ನು ನಿಯಂತ್ರಿಸಲು ಪರಿಣಾಮ ಬೀರಿದೆ ಎಂದಾಗುತ್ತದೆ. ಹೀಗಾಗಿ ಈ ಬಾರಿಯ ಸಭೆಯಲ್ಲಿ ಮತ್ತೊಮ್ಮೆ ಬಡ್ಡಿದರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವ ನಿರೀಕ್ಷೆ ಮಾಡಬಹುದು ಎಂದು ಬ್ಯಾಂಕ್ ಆಫ್ ಬರೋಡಾದ ಮುಖ್ಯ ಆರ್ಥಿಕ ತಜ್ಞ ಮದನ್ ಸಬ್ನವೀಸ್ ಹೇಳಿದ್ದಾರೆ.