ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಹಣಕಾಸು ನೀತಿ ಸಮಿತಿಯು (ಪಿಎಂಸಿ) ಮಂಗಳವಾರದಿಂದ ಗುರುವಾರದವರೆಗೆ ಸಭೆ ನಡೆಸಲಿದೆ. ಬಡ್ಡಿದರ ತಗ್ಗಿಸಲು ಅವಕಾಶವಿದೆಯಾದರೂ, ಆ ಅವಕಾಶವನ್ನು ವಿವೇಚನೆಯಿಂದ ಬಳಕೆ ಮಾಡಿಕೊಳ್ಳುವುದು ಬಹಳ ಮುಖ್ಯ ಎಂದು ದಾಸ್ ಅವರು ಈ ಹಿಂದೆಯೇ ಹೇಳಿದ್ದಾರೆ. ಹೀಗಾಗಿ ಈ ಬಾರಿಯ ಸಭೆಯಲ್ಲಿ ಯಾವುದೇ ಬದಲಾವಣೆ ನಿರೀಕ್ಷೆ ಮಾಡಲಾಗದು ಎಂದು ತಜ್ಞರು ಹೇಳಿದ್ದಾರೆ.