<p><strong>ನವದೆಹಲಿ</strong>: ಬ್ಯಾಂಕ್ಗಳಲ್ಲಿ ಕೃಷಿ ಹಾಗೂ ಅದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ಭದ್ರತೆ ಇಲ್ಲದೆ (ಅಡಮಾನರಹಿತ) ರೈತರಿಗೆ ನೀಡುವ ಸಾಲದ ಮಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ₹2 ಲಕ್ಷಕ್ಕೆ ಹೆಚ್ಚಿಸಿದೆ. ಈ ಆದೇಶವು ಜನವರಿ 1ರಿಂದ ಜಾರಿಗೆ ಬರಲಿದೆ.</p>.<p>ಈ ಮೊದಲು ಅಡಮಾನರಹಿತ ಸಾಲದ ಮಿತಿಯು ₹1.60 ಲಕ್ಷ ಇತ್ತು. ಪ್ರಸ್ತುತ ಕೃಷಿ ಉತ್ಪಾದನಾ ವೆಚ್ಚದಲ್ಲಿ ಏರಿಕೆಯಾಗಿದೆ. ಇದರಿಂದ ಅತಿಸಣ್ಣ ಮತ್ತು ಸಣ್ಣ ರೈತರಿಗೆ ಅನುಕೂಲ ಕಲ್ಪಿಸಲು ಸಾಲದ ಮಿತಿಯನ್ನು ಹೆಚ್ಚಿಸಲಾಗಿದೆ ಎಂದು ಆರ್ಬಿಐ ತಿಳಿಸಿದೆ.</p>.<p>ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಿಗದಿಪಡಿಸಿರುವ ಈ ಸಾಲವನ್ನು ಯಾವುದೇ ಭದ್ರತೆ ಇಲ್ಲದೆ ನೀಡಬೇಕು ಎಂದು ಎಲ್ಲಾ ಬ್ಯಾಂಕ್ಗಳಿಗೆ ನಿರ್ದೇಶನ ನೀಡಿದೆ.</p>.<p>ಕೃಷಿ ವೆಚ್ಚದ ಹೆಚ್ಚಳದಿಂದ ಶೇ 86ರಷ್ಟು ಅತಿಸಣ್ಣ ಮತ್ತು ಸಣ್ಣ ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಸಂಕಷ್ಟ ಅನುಭವಿಸುವಂತಾಗಿದೆ. ಹಾಗಾಗಿ, ಕೃಷಿ ಸಾಲ ನೀಡಿಕೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆರ್ಬಿಐ ಕೈಗೊಂಡಿರುವ ಈ ಕ್ರಮವು ರೈತರಿಗೆ ವರದಾನವಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿದೆ.</p>.<p>ಎಲ್ಲಾ ಬ್ಯಾಂಕ್ಗಳು ಆರ್ಬಿಐನ ಮಾರ್ಗಸೂಚಿ ಅನ್ವಯ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಬೇಕು. ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದೆ.</p>.<p>ಆರ್ಬಿಐನ ಈ ಕ್ರಮದಿಂದಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆಯಡಿ ಸಾಲ ಪಡೆಯುವ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸದ್ಯ ಕೆಸಿಸಿ ಅಡಿ ಶೇ 4ರ ಬಡ್ಡಿದರದಲ್ಲಿ ₹3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗುತ್ತಿದೆ. ಈ ಪೈಕಿ ₹2 ಲಕ್ಷದವರೆಗೆ ಅಡಮಾನರಹಿತ ಸಾಲ ದೊರೆಯಲಿದೆ.</p>.<p>ಕೆಸಿಸಿ ಅಡಿ ರೈತರಿಗೆ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಬಳಸಿ ರೈತರು ಕೃಷಿ ಅಗತ್ಯತೆಗೆ ಅನುಗುಣವಾಗಿ ಸಾಲ ಪಡೆಯಬಹುದಾಗಿದೆ. ಬಿತ್ತನೆ, ಬೆಳೆ ಪೋಷಣೆ, ಫಸಲಿಗೆ ರಸಗೊಬ್ಬರ ಪೂರೈಕೆ ಸೇರಿ ಇತರೆ ಕೃಷಿ ಚಟುವಟಿಕೆಗಳಿಗೆ ಕಾರ್ಡ್ ಬಳಸಿ ಸಾಲ ಪಡೆಯಬಹುದಾಗಿದೆ.</p>.<p>ಆರ್ಬಿಐನ ಕ್ರಮದಿಂದ ಕೃಷಿ ವಲಯದಲ್ಲಿ ಆರ್ಥಿಕ ಸೇರ್ಪಡೆಗೆ ಉತ್ತೇಜನ ಸಿಗಲಿದೆ. ಕೃಷಿ ಚಟುವಟಿಕೆಗಳ ಕಾರ್ಯಾಚರಣೆಯಲ್ಲಿ ಹೂಡಿಕೆ ಮಾಡಲು ರೈತರಿಗೆ ಸಹಕಾರಿಯಾಗಲಿದ್ದು, ಅವರ ಜೀವನಮಟ್ಟವೂ ಸುಧಾರಣೆಯಾಗಲಿದೆ. ಇದು ಕೃಷಿ ಆರ್ಥಿಕತೆ ಬೆಳವಣಿಗೆಗೆ ನೆರವಾಗಲಿದೆ ಎಂದು ಕೃಷಿ ತಜ್ಞರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬ್ಯಾಂಕ್ಗಳಲ್ಲಿ ಕೃಷಿ ಹಾಗೂ ಅದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ಭದ್ರತೆ ಇಲ್ಲದೆ (ಅಡಮಾನರಹಿತ) ರೈತರಿಗೆ ನೀಡುವ ಸಾಲದ ಮಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ₹2 ಲಕ್ಷಕ್ಕೆ ಹೆಚ್ಚಿಸಿದೆ. ಈ ಆದೇಶವು ಜನವರಿ 1ರಿಂದ ಜಾರಿಗೆ ಬರಲಿದೆ.</p>.<p>ಈ ಮೊದಲು ಅಡಮಾನರಹಿತ ಸಾಲದ ಮಿತಿಯು ₹1.60 ಲಕ್ಷ ಇತ್ತು. ಪ್ರಸ್ತುತ ಕೃಷಿ ಉತ್ಪಾದನಾ ವೆಚ್ಚದಲ್ಲಿ ಏರಿಕೆಯಾಗಿದೆ. ಇದರಿಂದ ಅತಿಸಣ್ಣ ಮತ್ತು ಸಣ್ಣ ರೈತರಿಗೆ ಅನುಕೂಲ ಕಲ್ಪಿಸಲು ಸಾಲದ ಮಿತಿಯನ್ನು ಹೆಚ್ಚಿಸಲಾಗಿದೆ ಎಂದು ಆರ್ಬಿಐ ತಿಳಿಸಿದೆ.</p>.<p>ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಿಗದಿಪಡಿಸಿರುವ ಈ ಸಾಲವನ್ನು ಯಾವುದೇ ಭದ್ರತೆ ಇಲ್ಲದೆ ನೀಡಬೇಕು ಎಂದು ಎಲ್ಲಾ ಬ್ಯಾಂಕ್ಗಳಿಗೆ ನಿರ್ದೇಶನ ನೀಡಿದೆ.</p>.<p>ಕೃಷಿ ವೆಚ್ಚದ ಹೆಚ್ಚಳದಿಂದ ಶೇ 86ರಷ್ಟು ಅತಿಸಣ್ಣ ಮತ್ತು ಸಣ್ಣ ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಸಂಕಷ್ಟ ಅನುಭವಿಸುವಂತಾಗಿದೆ. ಹಾಗಾಗಿ, ಕೃಷಿ ಸಾಲ ನೀಡಿಕೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆರ್ಬಿಐ ಕೈಗೊಂಡಿರುವ ಈ ಕ್ರಮವು ರೈತರಿಗೆ ವರದಾನವಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿದೆ.</p>.<p>ಎಲ್ಲಾ ಬ್ಯಾಂಕ್ಗಳು ಆರ್ಬಿಐನ ಮಾರ್ಗಸೂಚಿ ಅನ್ವಯ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಬೇಕು. ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದೆ.</p>.<p>ಆರ್ಬಿಐನ ಈ ಕ್ರಮದಿಂದಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆಯಡಿ ಸಾಲ ಪಡೆಯುವ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸದ್ಯ ಕೆಸಿಸಿ ಅಡಿ ಶೇ 4ರ ಬಡ್ಡಿದರದಲ್ಲಿ ₹3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗುತ್ತಿದೆ. ಈ ಪೈಕಿ ₹2 ಲಕ್ಷದವರೆಗೆ ಅಡಮಾನರಹಿತ ಸಾಲ ದೊರೆಯಲಿದೆ.</p>.<p>ಕೆಸಿಸಿ ಅಡಿ ರೈತರಿಗೆ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಬಳಸಿ ರೈತರು ಕೃಷಿ ಅಗತ್ಯತೆಗೆ ಅನುಗುಣವಾಗಿ ಸಾಲ ಪಡೆಯಬಹುದಾಗಿದೆ. ಬಿತ್ತನೆ, ಬೆಳೆ ಪೋಷಣೆ, ಫಸಲಿಗೆ ರಸಗೊಬ್ಬರ ಪೂರೈಕೆ ಸೇರಿ ಇತರೆ ಕೃಷಿ ಚಟುವಟಿಕೆಗಳಿಗೆ ಕಾರ್ಡ್ ಬಳಸಿ ಸಾಲ ಪಡೆಯಬಹುದಾಗಿದೆ.</p>.<p>ಆರ್ಬಿಐನ ಕ್ರಮದಿಂದ ಕೃಷಿ ವಲಯದಲ್ಲಿ ಆರ್ಥಿಕ ಸೇರ್ಪಡೆಗೆ ಉತ್ತೇಜನ ಸಿಗಲಿದೆ. ಕೃಷಿ ಚಟುವಟಿಕೆಗಳ ಕಾರ್ಯಾಚರಣೆಯಲ್ಲಿ ಹೂಡಿಕೆ ಮಾಡಲು ರೈತರಿಗೆ ಸಹಕಾರಿಯಾಗಲಿದ್ದು, ಅವರ ಜೀವನಮಟ್ಟವೂ ಸುಧಾರಣೆಯಾಗಲಿದೆ. ಇದು ಕೃಷಿ ಆರ್ಥಿಕತೆ ಬೆಳವಣಿಗೆಗೆ ನೆರವಾಗಲಿದೆ ಎಂದು ಕೃಷಿ ತಜ್ಞರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>