<p><strong>ಮುಂಬೈ</strong>: ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ದೇಶದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಬೆಳವಣಿಗೆ ಪ್ರಮಾಣದ ಅಂದಾಜನ್ನು ಆರ್ಬಿಐ ಶೇಕಡ 6.5ರಲ್ಲಿ ಉಳಿಸಿಕೊಂಡಿದೆ. ಚಿಲ್ಲರೆ ಹಣದುಬ್ಬರ ಪ್ರಮಾಣದ ಅಂದಾಜನ್ನು ಪರಿಷ್ಕರಿಸಿರುವ ಆರ್ಬಿಐ, ಅದನ್ನು ಶೇ 3.1ಕ್ಕೆ ತಗ್ಗಿಸಿದೆ.</p><p>ಅಮೆರಿಕವು ಭಾರತದ ಸರಕುಗಳ ಮೇಲೆ ದೊಡ್ಡ ಮಟ್ಟದಲ್ಲಿ ಸುಂಕವನ್ನು ವಿಧಿಸಿರುವ ಕಾರಣಕ್ಕೆ ದೇಶದ ಜಿಡಿಪಿ ಬೆಳವಣಿಗೆ ಪ್ರಮಾಣವು ತುಸು ತಗ್ಗಬಹುದು ಎಂದು ಕೆಲವು ಹಣಕಾಸು ಸಂಸ್ಥೆಗಳು ಅಂದಾಜು ಮಾಡಿದ್ದರೂ, ಆರ್ಬಿಐ ತನ್ನ ಅಂದಾಜನ್ನು ಪರಿಷ್ಕರಿಸಿಲ್ಲ.</p><p>ಮುಂಗಾರು ಮಳೆಯು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಿರುವುದು, ಹಣದುಬ್ಬರವು ಕಡಿಮೆ ಮಟ್ಟದಲ್ಲಿ ಇರುವುದು, ಹಣಕಾಸಿನ ಸ್ಥಿತಿಯು ಪೂರಕವಾಗಿ ಇರುವುದು ದೇಶದ ಆರ್ಥಿಕ ಚಟುವಟಿಕೆಗಳಿಗೆ ಪೂರಕವಾಗಿ ಇವೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.</p><p>ಹಣಕಾಸು ನೀತಿಗಳು, ವಿತ್ತೀಯ ಕ್ರಮಗಳು ಹಾಗೂ ಸರ್ಕಾರದ ಕಡೆಯಿಂದ ಆಗುತ್ತಿರುವ ದೊಡ್ಡ ಮಟ್ಟದ ಬಂಡವಾಳ ವೆಚ್ಚಗಳು ಕೂಡ ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಹೆಚ್ಚಿಸಲಿವೆ. ಸೇವಾ ವಲಯದಲ್ಲಿ ಬೆಳವಣಿಗೆ ಚೆನ್ನಾಗಿ ಇರಲಿದೆ ಎಂದು ಅವರು ಹೇಳಿದ್ದಾರೆ.</p><p>ಚಿಲ್ಲರೆ ಹಣದುಬ್ಬರ ಪ್ರಮಾಣವು ಎರಡನೆಯ ತ್ರೈಮಾಸಿಕದಲ್ಲಿ ಶೇ 2.1ರಷ್ಟು, ಮೂರನೆಯ ತ್ರೈಮಾಸಿಕದಲ್ಲಿ ಶೇ 3.1ರಷ್ಟು ಹಾಗೂ ನಾಲ್ಕನೆಯ ತ್ರೈಮಾಸಿಕದಲ್ಲಿ ಶೇ 4.4ರಷ್ಟು ಇರುವ ಅಂದಾಜು ಇದೆ ಎಂದು ಆರ್ಬಿಒ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ದೇಶದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಬೆಳವಣಿಗೆ ಪ್ರಮಾಣದ ಅಂದಾಜನ್ನು ಆರ್ಬಿಐ ಶೇಕಡ 6.5ರಲ್ಲಿ ಉಳಿಸಿಕೊಂಡಿದೆ. ಚಿಲ್ಲರೆ ಹಣದುಬ್ಬರ ಪ್ರಮಾಣದ ಅಂದಾಜನ್ನು ಪರಿಷ್ಕರಿಸಿರುವ ಆರ್ಬಿಐ, ಅದನ್ನು ಶೇ 3.1ಕ್ಕೆ ತಗ್ಗಿಸಿದೆ.</p><p>ಅಮೆರಿಕವು ಭಾರತದ ಸರಕುಗಳ ಮೇಲೆ ದೊಡ್ಡ ಮಟ್ಟದಲ್ಲಿ ಸುಂಕವನ್ನು ವಿಧಿಸಿರುವ ಕಾರಣಕ್ಕೆ ದೇಶದ ಜಿಡಿಪಿ ಬೆಳವಣಿಗೆ ಪ್ರಮಾಣವು ತುಸು ತಗ್ಗಬಹುದು ಎಂದು ಕೆಲವು ಹಣಕಾಸು ಸಂಸ್ಥೆಗಳು ಅಂದಾಜು ಮಾಡಿದ್ದರೂ, ಆರ್ಬಿಐ ತನ್ನ ಅಂದಾಜನ್ನು ಪರಿಷ್ಕರಿಸಿಲ್ಲ.</p><p>ಮುಂಗಾರು ಮಳೆಯು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಆಗಿರುವುದು, ಹಣದುಬ್ಬರವು ಕಡಿಮೆ ಮಟ್ಟದಲ್ಲಿ ಇರುವುದು, ಹಣಕಾಸಿನ ಸ್ಥಿತಿಯು ಪೂರಕವಾಗಿ ಇರುವುದು ದೇಶದ ಆರ್ಥಿಕ ಚಟುವಟಿಕೆಗಳಿಗೆ ಪೂರಕವಾಗಿ ಇವೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.</p><p>ಹಣಕಾಸು ನೀತಿಗಳು, ವಿತ್ತೀಯ ಕ್ರಮಗಳು ಹಾಗೂ ಸರ್ಕಾರದ ಕಡೆಯಿಂದ ಆಗುತ್ತಿರುವ ದೊಡ್ಡ ಮಟ್ಟದ ಬಂಡವಾಳ ವೆಚ್ಚಗಳು ಕೂಡ ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಹೆಚ್ಚಿಸಲಿವೆ. ಸೇವಾ ವಲಯದಲ್ಲಿ ಬೆಳವಣಿಗೆ ಚೆನ್ನಾಗಿ ಇರಲಿದೆ ಎಂದು ಅವರು ಹೇಳಿದ್ದಾರೆ.</p><p>ಚಿಲ್ಲರೆ ಹಣದುಬ್ಬರ ಪ್ರಮಾಣವು ಎರಡನೆಯ ತ್ರೈಮಾಸಿಕದಲ್ಲಿ ಶೇ 2.1ರಷ್ಟು, ಮೂರನೆಯ ತ್ರೈಮಾಸಿಕದಲ್ಲಿ ಶೇ 3.1ರಷ್ಟು ಹಾಗೂ ನಾಲ್ಕನೆಯ ತ್ರೈಮಾಸಿಕದಲ್ಲಿ ಶೇ 4.4ರಷ್ಟು ಇರುವ ಅಂದಾಜು ಇದೆ ಎಂದು ಆರ್ಬಿಒ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>