<p><strong>ಮುಂಬೈ</strong>: 2024–25ನೇ ಆರ್ಥಿಕ ವರ್ಷದಲ್ಲಿ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರವು, ಶೇ 4.5ರಷ್ಟು ಇರಲಿದೆ ಎಂದು ಹಣಕಾಸು ನೀತಿ ಸಮಿತಿ ಅಂದಾಜಿಸಿದೆ. </p>.<p>ಈ ಬಾರಿ ಮುಂಗಾರು ಸಾಮಾನ್ಯವಾಗಿರಲಿದೆ ಎಂಬ ಭಾರತೀಯ ಹವಾಮಾನ ಇಲಾಖೆಯು ಹೇಳಿದೆ. ಆದರೆ, ಆಹಾರ ಪದಾರ್ಥಗಳ ಬೆಲೆಯು ಅನಿಶ್ಚಿತತೆಯಿಂದ ಕೂಡಿದ್ದು, ಇದರ ಮೇಲೆ ನಿಗಾವಹಿಸಲಾಗಿದೆ ಎಂದು ತಿಳಿಸಿದೆ. </p>.<p>‘ಚಿಲ್ಲರೆ ಹಣದುಬ್ಬರ ಕುರಿತ ಅಪಾಯಗಳು ಕೂಡ ಸಮತೋಲಿತವಾಗಿವೆ’ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.</p>.<p>ಆಹಾರ ಪದಾರ್ಥಗಳ ಬೆಲೆ ಏರಿಕೆ ನಡುವೆಯೂ ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಹಣದುಬ್ಬರವು ಇಳಿಕೆಯಾಗಿದೆ. ಬೇಳೆಕಾಳು ಮತ್ತು ತರಕಾರಿಗಳ ಹಣದುಬ್ಬರವು ಎರಡಂಕಿ ದಾಟಿದೆ. </p>.<p>ಸರಕು ಮತ್ತು ಸೇವೆಗಳ ವೆಚ್ಚದಲ್ಲಿನ ಬದಲಾವಣೆಯ ಸೂಚಕವಾದ ಮೂಲ ಹಣದುಬ್ಬರ (ಕೋರ್ ಹಣದುಬ್ಬರ) 2023ರ ಜೂನ್ನಿಂದ ಮಂದಗತಿಯಲ್ಲಿದೆ. ಇದು ಆಹಾರ ಮತ್ತು ಇಂಧನ ಕ್ಷೇತ್ರವನ್ನು ಒಳಗೊಂಡಿಲ್ಲ. ಸೇವಾ ಹಣದುಬ್ಬರವು ಇಳಿಕೆಯಾಗಿದ್ದರೆ, ಸರಕುಗಳ ಬೆಲೆಯಲ್ಲಿ ಏರಿಕೆ ಮುಂದುವರಿದಿದೆ.</p>.<p>‘ಈ ಬಾರಿಯ ಬೇಸಿಗೆಯಲ್ಲಿ ತಾಪಮಾನ ಹೆಚ್ಚಿದೆ. ಮತ್ತೊಂದೆಡೆ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮಟ್ಟ ಕಡಿಮೆಯಿದೆ. ಇದು ತರಕಾರಿಗಳು ಮತ್ತು ಹಣ್ಣುಗಳ ದರ ಏರಿಕೆಗೆ ಕಾರಣವಾಗಲಿದೆ’ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.</p>.<p>ಜಾಗತಿಕ ಮಟ್ಟದಲ್ಲಿಯೂ ಆಹಾರ ಪದಾರ್ಥಗಳ ಬೆಲೆಯು ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಕೈಗಾರಿಕೆಯಲ್ಲಿ ಬಳಸುವ ಲೋಹಗಳ ಬೆಲೆಯು ಎರಡಂಕಿ ದಾಟಿದೆ. ಇದರಿಂದ ಕಾರ್ಖಾನೆಗಳ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.</p>.<p>‘ಸರ್ಕಾರವು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಗೋಧಿ ಸಂಗ್ರಹಣೆ ಮಾಡಿದೆ. ಗೋಧಿ ಮತ್ತು ಅಕ್ಕಿಯ ಕಾಪು ದಾಸ್ತಾನು ಹೆಚ್ಚಿದೆ. ಇದರಿಂದ ಆಹಾರದ ಹಣದುಬ್ಬರ ಇಳಿಕೆಯಾಗಬಹುದು. ಆದರೆ, ಜಾಗತಿಕ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲದ ಬೆಲೆಯು ಅನಿಶ್ಚಿತತೆಯಿಂದ ಕೂಡಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: 2024–25ನೇ ಆರ್ಥಿಕ ವರ್ಷದಲ್ಲಿ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರವು, ಶೇ 4.5ರಷ್ಟು ಇರಲಿದೆ ಎಂದು ಹಣಕಾಸು ನೀತಿ ಸಮಿತಿ ಅಂದಾಜಿಸಿದೆ. </p>.<p>ಈ ಬಾರಿ ಮುಂಗಾರು ಸಾಮಾನ್ಯವಾಗಿರಲಿದೆ ಎಂಬ ಭಾರತೀಯ ಹವಾಮಾನ ಇಲಾಖೆಯು ಹೇಳಿದೆ. ಆದರೆ, ಆಹಾರ ಪದಾರ್ಥಗಳ ಬೆಲೆಯು ಅನಿಶ್ಚಿತತೆಯಿಂದ ಕೂಡಿದ್ದು, ಇದರ ಮೇಲೆ ನಿಗಾವಹಿಸಲಾಗಿದೆ ಎಂದು ತಿಳಿಸಿದೆ. </p>.<p>‘ಚಿಲ್ಲರೆ ಹಣದುಬ್ಬರ ಕುರಿತ ಅಪಾಯಗಳು ಕೂಡ ಸಮತೋಲಿತವಾಗಿವೆ’ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.</p>.<p>ಆಹಾರ ಪದಾರ್ಥಗಳ ಬೆಲೆ ಏರಿಕೆ ನಡುವೆಯೂ ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಹಣದುಬ್ಬರವು ಇಳಿಕೆಯಾಗಿದೆ. ಬೇಳೆಕಾಳು ಮತ್ತು ತರಕಾರಿಗಳ ಹಣದುಬ್ಬರವು ಎರಡಂಕಿ ದಾಟಿದೆ. </p>.<p>ಸರಕು ಮತ್ತು ಸೇವೆಗಳ ವೆಚ್ಚದಲ್ಲಿನ ಬದಲಾವಣೆಯ ಸೂಚಕವಾದ ಮೂಲ ಹಣದುಬ್ಬರ (ಕೋರ್ ಹಣದುಬ್ಬರ) 2023ರ ಜೂನ್ನಿಂದ ಮಂದಗತಿಯಲ್ಲಿದೆ. ಇದು ಆಹಾರ ಮತ್ತು ಇಂಧನ ಕ್ಷೇತ್ರವನ್ನು ಒಳಗೊಂಡಿಲ್ಲ. ಸೇವಾ ಹಣದುಬ್ಬರವು ಇಳಿಕೆಯಾಗಿದ್ದರೆ, ಸರಕುಗಳ ಬೆಲೆಯಲ್ಲಿ ಏರಿಕೆ ಮುಂದುವರಿದಿದೆ.</p>.<p>‘ಈ ಬಾರಿಯ ಬೇಸಿಗೆಯಲ್ಲಿ ತಾಪಮಾನ ಹೆಚ್ಚಿದೆ. ಮತ್ತೊಂದೆಡೆ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮಟ್ಟ ಕಡಿಮೆಯಿದೆ. ಇದು ತರಕಾರಿಗಳು ಮತ್ತು ಹಣ್ಣುಗಳ ದರ ಏರಿಕೆಗೆ ಕಾರಣವಾಗಲಿದೆ’ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.</p>.<p>ಜಾಗತಿಕ ಮಟ್ಟದಲ್ಲಿಯೂ ಆಹಾರ ಪದಾರ್ಥಗಳ ಬೆಲೆಯು ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಕೈಗಾರಿಕೆಯಲ್ಲಿ ಬಳಸುವ ಲೋಹಗಳ ಬೆಲೆಯು ಎರಡಂಕಿ ದಾಟಿದೆ. ಇದರಿಂದ ಕಾರ್ಖಾನೆಗಳ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.</p>.<p>‘ಸರ್ಕಾರವು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಗೋಧಿ ಸಂಗ್ರಹಣೆ ಮಾಡಿದೆ. ಗೋಧಿ ಮತ್ತು ಅಕ್ಕಿಯ ಕಾಪು ದಾಸ್ತಾನು ಹೆಚ್ಚಿದೆ. ಇದರಿಂದ ಆಹಾರದ ಹಣದುಬ್ಬರ ಇಳಿಕೆಯಾಗಬಹುದು. ಆದರೆ, ಜಾಗತಿಕ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲದ ಬೆಲೆಯು ಅನಿಶ್ಚಿತತೆಯಿಂದ ಕೂಡಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>