‘ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಆರ್ಥಿಕತೆಯ ಚೇತರಿಕೆಗೆ ಹಣಕಾಸು ನೀತಿಯು ಬೆಂಬಲ ನೀಡುತ್ತಾ ಬಂದಿದೆ. ಸದ್ಯದ ಮಟ್ಟಿಗೆ ಬಡ್ಡಿದರ ಕಡಿತ ಮಾಡಲು ಅವಕಾಶ ಇದೆಯಾದರೂ, ವಿವೇಚನೆಯುತ ನಿರ್ಧಾರ ತೆಗೆದುಕೊಂದು ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಹಣದುಬ್ಬರ ಮತ್ತು ಆರ್ಥಿಕ ಬೆಳವಣಿಗೆಯ ಮುನ್ನೋಟದ ಬಗ್ಗೆ ಒಂದು ಸ್ಥಿರ ಲೆಕ್ಕಾಚಾರದ ಅಗತ್ಯವಿದೆ. ಆರ್ಥಿಕ ಚಟುವಟಿಕೆಗಳಿಗೆ ವೇಗ ದೊರೆತು, ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳು ಬಗೆಹರಿದು, ಬೆಲೆಯಲ್ಲಿ ಸ್ಥಿರತೆ ಮೂಡಬೇಕಿದೆ’ ಎಂದು ಹೇಳಿದ್ದಾರೆ.