ಮುಂಬೈ: ತನ್ನ ನಿರ್ದೇಶಕ ಮಂಡಳಿಯ ಸಭೆಯ ಕಲಾಪಗಳ ವಿವರಗಳನ್ನು ಬಹಿರಂಗಪಡಿಸಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ.
ಕೇಂದ್ರೀಯ ಬ್ಯಾಂಕ್ನ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಸಭೆಯಲ್ಲಿ ಚರ್ಚಿಸಲಾದ ಸಂಗತಿಗಳ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ (ಆರ್ಟಿಐ) ವಿವರಗಳನ್ನು ಕೇಳುವ ಪ್ರವೃತ್ತಿಗೆ ಕೊನೆ ಹಾಡಲು ಈ ನಿರ್ಧಾರಕ್ಕೆ ಬರಲಾಗಿದೆ.
2019ರ ಅಕ್ಟೋಬರ್ನಲ್ಲಿ ಚಂಡೀಗಡದಲ್ಲಿ ನಡೆದಿದ್ದ ನಿರ್ದೇಶಕ ಮಂಡಳಿ ಸಭೆಯ ವಿವರಗಳನ್ನು ಈಗ ಬಹಿರಂಗಪಡಿಸಿ ಈ ನಿರ್ಧಾರವನ್ನು ಕಾರ್ಯಗತಗೊಳಿಸುವುದಕ್ಕೆ ಚಾಲನೆ ನೀಡಿದೆ.
ನಿರ್ದೇಶಕ ಮಂಡಳಿ ಸಭೆಯಲ್ಲಿ ಚರ್ಚೆಗೆ ಬರುವ ವಿಷಯಗಳು ಸಾರ್ವಜನಿಕವಾಗಿ ಹೆಚ್ಚು ಆಸಕ್ತಿದಾಯಕವಾಗಿರುತ್ತವೆ. ಹೀಗಾಗಿ ಇನ್ನು ಮುಂದೆ ಸಭೆಯ ವಿವರಗಳನ್ನು ಆರ್ಟಿಐ ಕಾಯ್ದೆ ಪ್ರಕಾರ ಬ್ಯಾಂಕ್ನ ಅಂತರ್ಜಾಲ ತಾಣದಲ್ಲಿ ಪ್ರಕಟಿಸಲಾಗುವುದು. ಸಭೆಯ ಕಲಾಪಗಳನ್ನು ಮುಂದಿನ ಸಭೆಯಲ್ಲಿ ದೃಢಪಡಿಸಿದ ಎರಡು ವಾರಗಳಲ್ಲಿ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಆರ್ಬಿಐ ತಿಳಿಸಿದೆ.
ಗವರ್ನರ್ ಶಕ್ತಿಕಾಂತ್ ದಾಸ್ ಅವರು ಅಧಿಕಾರವಹಿಸಿಕೊಂಡ ನಂತರ ಆರ್ಬಿಐನ ಕಾರ್ಯವೈಖರಿಯಲ್ಲಿ ಹೆಚ್ಚಿನ ಬದಲಾವಣೆ ಕಂಡು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.