<p><strong>ಮುಂಬೈ (ಪಿಟಿಐ)</strong>: ಒಂಬುಡ್ಸ್ಮನ್ ವ್ಯವಸ್ಥೆಯಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿಯಿಂದ ಬಾಕಿ ಉಳಿದಿರುವ ದೂರುಗಳನ್ನು ಇತ್ಯರ್ಥಪಡಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಅಭಿಯಾನವೊಂದನ್ನು ಆರಂಭಿಸಲಿದೆ.</p>.<p>ಈ ಅಭಿಯಾನವು ಮುಂದಿನ ತಿಂಗಳು ಆರಂಭವಾಗಲಿದ್ದು, ಎರಡು ತಿಂಗಳ ಅವಧಿಗೆ ನಡೆಯಲಿದೆ. ಆರ್ಬಿಐನ ಒಂಬುಡ್ಸ್ಮನ್ ವ್ಯವಸ್ಥೆಯು ಗ್ರಾಹಕರ ದೂರುಗಳನ್ನು ಉಚಿತವಾಗಿ ಪರಿಹರಿಸಿಕೊಡುವ ಕೆಲಸ ಮಾಡುತ್ತದೆ.</p>.<p>‘ನಾವು ಗ್ರಾಹಕ ಸೇವೆಗಳನ್ನು ಸುಧಾರಿಸುವ ಕಡೆ ಗಮನ ಹರಿಸುತ್ತಿದ್ದೇವೆ. ಈ ವಿಚಾರವಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ’ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>‘ಶೇಕಡ 99.8ರಷ್ಟಕ್ಕಿಂತ ಹೆಚ್ಚಿನ ಪ್ರಮಾಣದ ದೂರುಗಳನ್ನು ನಿಗದಿತ ಅವಧಿಯಲ್ಲಿ ಇತ್ಯರ್ಥಪಡಿಸಲಾಗುತ್ತಿದೆ’ ಎಂದು ಮಲ್ಹೋತ್ರಾ ತಿಳಿಸಿದ್ದಾರೆ.</p>.<p>ಆದರೆ ಈಚಿನ ದಿನಗಳಲ್ಲಿ ದೂರುಗಳು ದಾಖಲಾಗುವುದು ಹೆಚ್ಚಾಗಿರುವ ಕಾರಣದಿಂದಾಗಿ ಆರ್ಬಿಐ ಒಂಬುಡ್ಸ್ಮನ್ ವ್ಯವಸ್ಥೆಯಲ್ಲಿ ದೂರುಗಳು ಬಾಕಿಯಾಗುವುದು ಹೆಚ್ಚಾಗಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ)</strong>: ಒಂಬುಡ್ಸ್ಮನ್ ವ್ಯವಸ್ಥೆಯಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿಯಿಂದ ಬಾಕಿ ಉಳಿದಿರುವ ದೂರುಗಳನ್ನು ಇತ್ಯರ್ಥಪಡಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಅಭಿಯಾನವೊಂದನ್ನು ಆರಂಭಿಸಲಿದೆ.</p>.<p>ಈ ಅಭಿಯಾನವು ಮುಂದಿನ ತಿಂಗಳು ಆರಂಭವಾಗಲಿದ್ದು, ಎರಡು ತಿಂಗಳ ಅವಧಿಗೆ ನಡೆಯಲಿದೆ. ಆರ್ಬಿಐನ ಒಂಬುಡ್ಸ್ಮನ್ ವ್ಯವಸ್ಥೆಯು ಗ್ರಾಹಕರ ದೂರುಗಳನ್ನು ಉಚಿತವಾಗಿ ಪರಿಹರಿಸಿಕೊಡುವ ಕೆಲಸ ಮಾಡುತ್ತದೆ.</p>.<p>‘ನಾವು ಗ್ರಾಹಕ ಸೇವೆಗಳನ್ನು ಸುಧಾರಿಸುವ ಕಡೆ ಗಮನ ಹರಿಸುತ್ತಿದ್ದೇವೆ. ಈ ವಿಚಾರವಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ’ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>‘ಶೇಕಡ 99.8ರಷ್ಟಕ್ಕಿಂತ ಹೆಚ್ಚಿನ ಪ್ರಮಾಣದ ದೂರುಗಳನ್ನು ನಿಗದಿತ ಅವಧಿಯಲ್ಲಿ ಇತ್ಯರ್ಥಪಡಿಸಲಾಗುತ್ತಿದೆ’ ಎಂದು ಮಲ್ಹೋತ್ರಾ ತಿಳಿಸಿದ್ದಾರೆ.</p>.<p>ಆದರೆ ಈಚಿನ ದಿನಗಳಲ್ಲಿ ದೂರುಗಳು ದಾಖಲಾಗುವುದು ಹೆಚ್ಚಾಗಿರುವ ಕಾರಣದಿಂದಾಗಿ ಆರ್ಬಿಐ ಒಂಬುಡ್ಸ್ಮನ್ ವ್ಯವಸ್ಥೆಯಲ್ಲಿ ದೂರುಗಳು ಬಾಕಿಯಾಗುವುದು ಹೆಚ್ಚಾಗಿದೆ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>