ನವದೆಹಲಿ (ಪಿಟಿಐ): ಕ್ರಿಪ್ಟೊಕರೆನ್ಸಿಗಳು ದೇಶದ ಹಣಕಾಸು ಮತ್ತು ಆರ್ಥಿಕ ಸ್ಥಿರತೆಯನ್ನು ಹಾಳುಮಾಡುವ ಸಾಮರ್ಥ್ಯ ಹೊಂದಿರುವ ಕಾರಣ ಅವುಗಳನ್ನು ನಿಷೇಧಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೇಳಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.
ಕ್ರಿಪ್ಟೊಕರೆನ್ಸಿ ಎಂಬುದು ಒಂದು ಕರೆನ್ಸಿಯೇ ಅಲ್ಲ ಎಂದು ಆರ್ಬಿಐ ಹೇಳಿದೆ. ಏಕೆಂದರೆ, ಆಧುನಿಕ ಕಾಲದ ಕರೆನ್ಸಿಗಳನ್ನು ಕೇಂದ್ರೀಯ ಬ್ಯಾಂಕ್ ಅಥವಾ ಕೇಂದ್ರ ಸರ್ಕಾರದಿಂದ ಹೊರಡಿಸಬೇಕಾಗುತ್ತದೆ ಎಂದು ನಿರ್ಮಲಾ ಅವರು ವಿವರಣೆ ನೀಡಿದ್ದಾರೆ.