<p><strong>ಬೆಂಗಳೂರು</strong>: ‘2025ರಲ್ಲಿ ದಕ್ಷಿಣ ಭಾರತದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿನ ಮನೆಗಳ ಮಾರಾಟದ ಮೌಲ್ಯವು ಅಂದಾಜು ₹20 ಸಾವಿರ ಕೋಟಿ ದಾಟಿದೆ’ ಎಂದು ಬ್ರಿಗೇಡ್ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಆರ್. ಜೈಶಂಕರ್ ಹೇಳಿದ್ದಾರೆ.</p>.<p>ಅಖಿಲ ಭಾರತದ ಮಟ್ಟಕ್ಕೆ ಹೋಲಿಸಿದರೆ, ದಕ್ಷಿಣ ಭಾರತದ ರಿಯಲ್ ಎಸ್ಟೇಟ್ ಮಾರುಕಟ್ಟೆ ಹಿಂದುಳಿದಿದೆ. ಕೊಯಮತ್ತೂರು, ಕೊಚ್ಚಿನ್, ತಿರುವನಂತಪುರ, ವಿಶಾಖಪಟ್ಟಣಂ ವೇಗವಾಗಿ ಅಭಿವೃದ್ಧಿ ಹೊಂದುತ್ತಿವೆ. ರಿಯಲ್ ಎಸ್ಟೇಟ್ ಮಾರುಕಟ್ಟೆಯ ಅಭಿವೃದ್ಧಿಗೆ ಸರ್ಕಾರದ ನೆರವು ಅಗತ್ಯ ಎಂದು ಕ್ರೆಡಾಯ್ ಸೌತ್ಕಾನ್ 2026ರಲ್ಲಿ ಹೇಳಿದ್ದಾರೆ.</p>.<p>ದಕ್ಷಿಣ ಭಾರತದ ವಾಣಿಜ್ಯ ರಿಯಲ್ ಎಸ್ಟೇಟ್ ಮಾರುಕಟ್ಟೆಯು 2030ರ ವೇಳೆಗೆ ಸದೃಢವಾಗಿ ಬೆಳವಣಿಗೆ ಕಾಣಲಿದೆ ಎಂದು ತಿಳಿಸಿದ್ದಾರೆ.</p>.<p>ರಾಜ್ಯದಲ್ಲೂ ಸಹ ಎರಡು ಮತ್ತು ಮೂರನೇ ಹಂತದ ನಗರಗಳು ತ್ವರಿತವಾಗಿ ಪ್ರಗತಿ ಕಾಣುತ್ತಿವೆ. ಅಲ್ಲದೆ, ಮುಂದಿನ ದಿನಗಳಲ್ಲಿ ಈ ವಲಯದಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳು ಸೃಷ್ಟಿ ಆಗಲಿವೆ ಎಂದು ಕ್ರೆಡಾಯ್ನ ಕರ್ನಾಟಕದ ಅಧ್ಯಕ್ಷ ಭಾಸ್ಕರ್ ಟಿ. ನಾಗೇಂದ್ರಪ್ಪ ಅವರು ಹೇಳಿದ್ದಾರೆ.</p>.<p>ರಿಯಲ್ ಎಸ್ಟೇಟ್ ವಲಯದಲ್ಲಿ ನಂಬಿಕೆ ಅಗತ್ಯ. ಮನೆ ಖರೀದಿ ಮಾಡುವವರ ವಿಶ್ವಾಸವನ್ನು ಪಡೆಯುವುದು ಅತಿ ಅಗತ್ಯ ಎಂದರು.</p>.<p>ಕಾರ್ಯಕ್ರಮದಲ್ಲಿ ಕ್ರೆಡಾಯ್ನ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದ ಅಧ್ಯಕ್ಷರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘2025ರಲ್ಲಿ ದಕ್ಷಿಣ ಭಾರತದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿನ ಮನೆಗಳ ಮಾರಾಟದ ಮೌಲ್ಯವು ಅಂದಾಜು ₹20 ಸಾವಿರ ಕೋಟಿ ದಾಟಿದೆ’ ಎಂದು ಬ್ರಿಗೇಡ್ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಆರ್. ಜೈಶಂಕರ್ ಹೇಳಿದ್ದಾರೆ.</p>.<p>ಅಖಿಲ ಭಾರತದ ಮಟ್ಟಕ್ಕೆ ಹೋಲಿಸಿದರೆ, ದಕ್ಷಿಣ ಭಾರತದ ರಿಯಲ್ ಎಸ್ಟೇಟ್ ಮಾರುಕಟ್ಟೆ ಹಿಂದುಳಿದಿದೆ. ಕೊಯಮತ್ತೂರು, ಕೊಚ್ಚಿನ್, ತಿರುವನಂತಪುರ, ವಿಶಾಖಪಟ್ಟಣಂ ವೇಗವಾಗಿ ಅಭಿವೃದ್ಧಿ ಹೊಂದುತ್ತಿವೆ. ರಿಯಲ್ ಎಸ್ಟೇಟ್ ಮಾರುಕಟ್ಟೆಯ ಅಭಿವೃದ್ಧಿಗೆ ಸರ್ಕಾರದ ನೆರವು ಅಗತ್ಯ ಎಂದು ಕ್ರೆಡಾಯ್ ಸೌತ್ಕಾನ್ 2026ರಲ್ಲಿ ಹೇಳಿದ್ದಾರೆ.</p>.<p>ದಕ್ಷಿಣ ಭಾರತದ ವಾಣಿಜ್ಯ ರಿಯಲ್ ಎಸ್ಟೇಟ್ ಮಾರುಕಟ್ಟೆಯು 2030ರ ವೇಳೆಗೆ ಸದೃಢವಾಗಿ ಬೆಳವಣಿಗೆ ಕಾಣಲಿದೆ ಎಂದು ತಿಳಿಸಿದ್ದಾರೆ.</p>.<p>ರಾಜ್ಯದಲ್ಲೂ ಸಹ ಎರಡು ಮತ್ತು ಮೂರನೇ ಹಂತದ ನಗರಗಳು ತ್ವರಿತವಾಗಿ ಪ್ರಗತಿ ಕಾಣುತ್ತಿವೆ. ಅಲ್ಲದೆ, ಮುಂದಿನ ದಿನಗಳಲ್ಲಿ ಈ ವಲಯದಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳು ಸೃಷ್ಟಿ ಆಗಲಿವೆ ಎಂದು ಕ್ರೆಡಾಯ್ನ ಕರ್ನಾಟಕದ ಅಧ್ಯಕ್ಷ ಭಾಸ್ಕರ್ ಟಿ. ನಾಗೇಂದ್ರಪ್ಪ ಅವರು ಹೇಳಿದ್ದಾರೆ.</p>.<p>ರಿಯಲ್ ಎಸ್ಟೇಟ್ ವಲಯದಲ್ಲಿ ನಂಬಿಕೆ ಅಗತ್ಯ. ಮನೆ ಖರೀದಿ ಮಾಡುವವರ ವಿಶ್ವಾಸವನ್ನು ಪಡೆಯುವುದು ಅತಿ ಅಗತ್ಯ ಎಂದರು.</p>.<p>ಕಾರ್ಯಕ್ರಮದಲ್ಲಿ ಕ್ರೆಡಾಯ್ನ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದ ಅಧ್ಯಕ್ಷರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>