<p><strong>ನವದೆಹಲಿ</strong>: ‘ದೇಶದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಪ್ರಮುಖ ಬೆಳೆಗಳಿಗೆ ಹಾನಿಯಾಗಿಲ್ಲ. ಈ ಮಳೆಯು ಬೇಸಿಗೆಯ ಬೆಳೆ ಉತ್ಪಾದನೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ’ ಎಂದು ಕೇಂದ್ರ ಕೃಷಿ ಇಲಾಖೆಯ ಕಾರ್ಯದರ್ಶಿ ದೇವೇಶ್ ಚತುರ್ವೇದಿ ಹೇಳಿದ್ದಾರೆ.</p>.<p>ಈ ಹಠಾತ್ ಮಳೆಯಿಂದ ಇಲ್ಲಿಯವರೆಗೆ ಯಾವುದೇ ಹಾನಿ ವರದಿಯಾಗಿಲ್ಲ. ಅಲ್ಲದೇ, ಈ ಮಳೆ ಹೆಸರುಕಾಳು, ಜೋಳ ಮತ್ತು ಭತ್ತದ ಬೆಳೆಗಳಿಗೆ ಅನುಕೂಲವಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದ ಮಾವು ಮತ್ತು ಲಿಚಿ ಹಣ್ಣುಗಳು ಉದುರಿವೆ. ಆದರೆ, ಆಯಾ ರಾಜ್ಯ ಸರ್ಕಾರಗಳು ಈ ಕುರಿತು ಸಚಿವಾಲಯಕ್ಕೆ ವರದಿ ಸಲ್ಲಿಸಿಲ್ಲ ಎಂದರು.</p>.<p>ಜುಲೈನಿಂದ ಪ್ರಾರಂಭವಾಗುವ ಭತ್ತದ ಬಿತ್ತನೆಯ ಸಿದ್ಧತೆ ಪ್ರಗತಿಯಲ್ಲಿದೆ. 2024-25ನೇ ಬೆಳೆ ವರ್ಷದ (ಜುಲೈ-ಜೂನ್) ಮೂರನೇ ಆಹಾರ ಧಾನ್ಯ ಉತ್ಪಾದನಾ ಅಂದಾಜು ಮೂರ್ನಾಲ್ಕು ದಿನಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ದೇಶದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಪ್ರಮುಖ ಬೆಳೆಗಳಿಗೆ ಹಾನಿಯಾಗಿಲ್ಲ. ಈ ಮಳೆಯು ಬೇಸಿಗೆಯ ಬೆಳೆ ಉತ್ಪಾದನೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ’ ಎಂದು ಕೇಂದ್ರ ಕೃಷಿ ಇಲಾಖೆಯ ಕಾರ್ಯದರ್ಶಿ ದೇವೇಶ್ ಚತುರ್ವೇದಿ ಹೇಳಿದ್ದಾರೆ.</p>.<p>ಈ ಹಠಾತ್ ಮಳೆಯಿಂದ ಇಲ್ಲಿಯವರೆಗೆ ಯಾವುದೇ ಹಾನಿ ವರದಿಯಾಗಿಲ್ಲ. ಅಲ್ಲದೇ, ಈ ಮಳೆ ಹೆಸರುಕಾಳು, ಜೋಳ ಮತ್ತು ಭತ್ತದ ಬೆಳೆಗಳಿಗೆ ಅನುಕೂಲವಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದ ಮಾವು ಮತ್ತು ಲಿಚಿ ಹಣ್ಣುಗಳು ಉದುರಿವೆ. ಆದರೆ, ಆಯಾ ರಾಜ್ಯ ಸರ್ಕಾರಗಳು ಈ ಕುರಿತು ಸಚಿವಾಲಯಕ್ಕೆ ವರದಿ ಸಲ್ಲಿಸಿಲ್ಲ ಎಂದರು.</p>.<p>ಜುಲೈನಿಂದ ಪ್ರಾರಂಭವಾಗುವ ಭತ್ತದ ಬಿತ್ತನೆಯ ಸಿದ್ಧತೆ ಪ್ರಗತಿಯಲ್ಲಿದೆ. 2024-25ನೇ ಬೆಳೆ ವರ್ಷದ (ಜುಲೈ-ಜೂನ್) ಮೂರನೇ ಆಹಾರ ಧಾನ್ಯ ಉತ್ಪಾದನಾ ಅಂದಾಜು ಮೂರ್ನಾಲ್ಕು ದಿನಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>