<p><strong>ನವದೆಹಲಿ:</strong> 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು, ₹19,407 ಕೋಟಿ ನಿವ್ವಳ ಲಾಭ ಗಳಿಸಿದೆ. </p>.<p>2023–24ನೇ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ನಿವ್ವಳ ಲಾಭದಲ್ಲಿ ಶೇ 2.4ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ₹2.88 ಲಕ್ಷ ಕೋಟಿ ವರಮಾನ ಗಳಿಸಿದೆ. ಒಟ್ಟಾರೆ ವರಮಾನದಲ್ಲಿ ಶೇ 8.8ರಷ್ಟು ಹೆಚ್ಚಳವಾಗಿದೆ ಎಂದು ಕಂಪನಿಯು, ಷೇರುಪೇಟೆಗೆ ಮಾಹಿತಿ ನೀಡಿದೆ.</p>.<p>ಅಲ್ಲದೆ, ನಿವ್ವಳ ಮೌಲ್ಯ ₹10 ಲಕ್ಷ ಕೋಟಿ ದಾಟಿದ ದೇಶದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್ ಇಂಡಸ್ಟ್ರೀಸ್ ಭಾಜನವಾಗಿದೆ. ಪ್ರತಿ ಷೇರಿಗೆ ₹5.50 ಲಾಭಾಂಶ ನೀಡಲು ಆಡಳಿತ ಮಂಡಳಿಯು ಅನುಮೋದನೆ ನೀಡಿದೆ. ಅಲ್ಲದೆ, ಪರಿವರ್ತಿಸಲಾಗದ ಸಾಲಪತ್ರಗಳ (ಎನ್ಸಿಡಿ) ವಿತರಣೆ ಮೂಲಕ ₹25 ಸಾವಿರ ಕೋಟಿ ಸಂಗ್ರಹಿಸಲು ನಿರ್ಧರಿಸಿದೆ. </p>.<p>‘ಇಂಧನ ಮಾರುಕಟ್ಟೆಯಲ್ಲಿನ ಏರಿಳಿತದ ಹೊರತಾಗಿಯೂ ತೈಲದಿಂದ ರಾಸಾಯನಿಕ ವ್ಯವಹಾರದಲ್ಲಿ ಸ್ಥಿರವಾದ ಫಲಿತಾಂಶ ದಾಖಲಿಸಲಾಗಿದೆ. ಸಂಯೋಜಿತ ವ್ಯವಹಾರಗಳ ಕಾರ್ಯಾಚರಣೆಯು ಸದೃಢವಾಗಿದೆ. ಇದೇ ಲಾಭದ ಪ್ರಮಾಣ ಏರಿಕೆಗೆ ಕಾರಣ’ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು, ₹19,407 ಕೋಟಿ ನಿವ್ವಳ ಲಾಭ ಗಳಿಸಿದೆ. </p>.<p>2023–24ನೇ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ನಿವ್ವಳ ಲಾಭದಲ್ಲಿ ಶೇ 2.4ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ₹2.88 ಲಕ್ಷ ಕೋಟಿ ವರಮಾನ ಗಳಿಸಿದೆ. ಒಟ್ಟಾರೆ ವರಮಾನದಲ್ಲಿ ಶೇ 8.8ರಷ್ಟು ಹೆಚ್ಚಳವಾಗಿದೆ ಎಂದು ಕಂಪನಿಯು, ಷೇರುಪೇಟೆಗೆ ಮಾಹಿತಿ ನೀಡಿದೆ.</p>.<p>ಅಲ್ಲದೆ, ನಿವ್ವಳ ಮೌಲ್ಯ ₹10 ಲಕ್ಷ ಕೋಟಿ ದಾಟಿದ ದೇಶದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ರಿಲಯನ್ಸ್ ಇಂಡಸ್ಟ್ರೀಸ್ ಭಾಜನವಾಗಿದೆ. ಪ್ರತಿ ಷೇರಿಗೆ ₹5.50 ಲಾಭಾಂಶ ನೀಡಲು ಆಡಳಿತ ಮಂಡಳಿಯು ಅನುಮೋದನೆ ನೀಡಿದೆ. ಅಲ್ಲದೆ, ಪರಿವರ್ತಿಸಲಾಗದ ಸಾಲಪತ್ರಗಳ (ಎನ್ಸಿಡಿ) ವಿತರಣೆ ಮೂಲಕ ₹25 ಸಾವಿರ ಕೋಟಿ ಸಂಗ್ರಹಿಸಲು ನಿರ್ಧರಿಸಿದೆ. </p>.<p>‘ಇಂಧನ ಮಾರುಕಟ್ಟೆಯಲ್ಲಿನ ಏರಿಳಿತದ ಹೊರತಾಗಿಯೂ ತೈಲದಿಂದ ರಾಸಾಯನಿಕ ವ್ಯವಹಾರದಲ್ಲಿ ಸ್ಥಿರವಾದ ಫಲಿತಾಂಶ ದಾಖಲಿಸಲಾಗಿದೆ. ಸಂಯೋಜಿತ ವ್ಯವಹಾರಗಳ ಕಾರ್ಯಾಚರಣೆಯು ಸದೃಢವಾಗಿದೆ. ಇದೇ ಲಾಭದ ಪ್ರಮಾಣ ಏರಿಕೆಗೆ ಕಾರಣ’ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>