<p>ಬೆಂಗಳೂರು: ರಿಲಯನ್ಸ್ ರಿಟೇಲ್ ಕಂಪನಿಯು ‘ಸ್ವದೇಶ್ ಸ್ಟೋರ್’ಗಳನ್ನು ಆರಂಭಿಸಲಿದ್ದು, ಭಾರತೀಯ ಕುಶಲಕರ್ಮಿಗಳು ಸಿದ್ಧಪಡಿಸುವ ಉತ್ಪನ್ನಗಳಿಗೆ ಇದು ಜಾಗತಿಕ ಮಾರಾಟ ವೇದಿಕೆಯಾಗಿ ಕೆಲಸ ಮಾಡಲಿದೆ.</p>.<p>ಈ ವರ್ಷದ ದ್ವಿತೀಯಾರ್ಧದಲ್ಲಿ ಮೊದಲ ಸ್ವದೇಶ್ ಮಳಿಗೆ ಆರಂಭವಾಗುವ ನಿರೀಕ್ಷೆಯಿದೆ. ಇದರಲ್ಲಿ ಕರಕುಶಲ ಉಡುಪುಗಳು, ಕೈಮಗ್ಗದ ಉತ್ಪನ್ನಗಳು, ಕೃಷಿ ಉತ್ಪನ್ನಗಳು ಮತ್ತು ಇತರ ಕೆಲವು ಉತ್ಪನ್ನಗಳು ದೊರೆಯಲಿವೆ. ಇವುಗಳನ್ನು ನೇರವಾಗಿ ಕಲಾವಿದರಿಂದಲೇ ಖರೀದಿಸಲಾಗುತ್ತದೆ. ವಿಶ್ವದ ಎಲ್ಲೆಡೆಯ ಗ್ರಾಹಕರು ಈ ಉತ್ಪನ್ನಗಳನ್ನು ಖರೀದಿಸಲು ಅವಕಾಶ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಭಾರತೀಯ ಕರಕುಶಲ ಉತ್ಪನ್ನಗಳಿಗೆ ಬೇಡಿಕೆ ಗಣನೀಯವಾಗಿ ಹೆಚ್ಚುತ್ತಿದೆ. ನಮ್ಮ ವಿಶೇಷ ಸ್ಟೋರ್ ಆಗಿರುವ ಸ್ವದೇಶ್ ಈಗ ಅಂತಿಮ ರೂಪ ಪಡೆದುಕೊಂಡಿದೆ’ ಎಂದು ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ ನಿರ್ದೇಶಕಿ ಇಶಾ ಅಂಬಾನಿ ಹೇಳಿದ್ದಾರೆ.</p>.<p>ರಾಜ್ಯ ಸರ್ಕಾರಗಳ ಜೊತೆಗೆ ಸ್ವದೇಶ್ ಒಪ್ಪಂದ ಮಾಡಿಕೊಳ್ಳುತ್ತಿದೆ. ಜವಳಿ ಸಚಿವಾಲಯದ ಜೊತೆಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಇದರ ಅಡಿಯಲ್ಲಿ ಕರಕುಶಲ ಕರ್ಮಿಗಳಿಂದ ನೇರವಾಗಿ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಕಂಪನಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಿಲಯನ್ಸ್ ರಿಟೇಲ್ ಕಂಪನಿಯು ‘ಸ್ವದೇಶ್ ಸ್ಟೋರ್’ಗಳನ್ನು ಆರಂಭಿಸಲಿದ್ದು, ಭಾರತೀಯ ಕುಶಲಕರ್ಮಿಗಳು ಸಿದ್ಧಪಡಿಸುವ ಉತ್ಪನ್ನಗಳಿಗೆ ಇದು ಜಾಗತಿಕ ಮಾರಾಟ ವೇದಿಕೆಯಾಗಿ ಕೆಲಸ ಮಾಡಲಿದೆ.</p>.<p>ಈ ವರ್ಷದ ದ್ವಿತೀಯಾರ್ಧದಲ್ಲಿ ಮೊದಲ ಸ್ವದೇಶ್ ಮಳಿಗೆ ಆರಂಭವಾಗುವ ನಿರೀಕ್ಷೆಯಿದೆ. ಇದರಲ್ಲಿ ಕರಕುಶಲ ಉಡುಪುಗಳು, ಕೈಮಗ್ಗದ ಉತ್ಪನ್ನಗಳು, ಕೃಷಿ ಉತ್ಪನ್ನಗಳು ಮತ್ತು ಇತರ ಕೆಲವು ಉತ್ಪನ್ನಗಳು ದೊರೆಯಲಿವೆ. ಇವುಗಳನ್ನು ನೇರವಾಗಿ ಕಲಾವಿದರಿಂದಲೇ ಖರೀದಿಸಲಾಗುತ್ತದೆ. ವಿಶ್ವದ ಎಲ್ಲೆಡೆಯ ಗ್ರಾಹಕರು ಈ ಉತ್ಪನ್ನಗಳನ್ನು ಖರೀದಿಸಲು ಅವಕಾಶ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಭಾರತೀಯ ಕರಕುಶಲ ಉತ್ಪನ್ನಗಳಿಗೆ ಬೇಡಿಕೆ ಗಣನೀಯವಾಗಿ ಹೆಚ್ಚುತ್ತಿದೆ. ನಮ್ಮ ವಿಶೇಷ ಸ್ಟೋರ್ ಆಗಿರುವ ಸ್ವದೇಶ್ ಈಗ ಅಂತಿಮ ರೂಪ ಪಡೆದುಕೊಂಡಿದೆ’ ಎಂದು ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ ನಿರ್ದೇಶಕಿ ಇಶಾ ಅಂಬಾನಿ ಹೇಳಿದ್ದಾರೆ.</p>.<p>ರಾಜ್ಯ ಸರ್ಕಾರಗಳ ಜೊತೆಗೆ ಸ್ವದೇಶ್ ಒಪ್ಪಂದ ಮಾಡಿಕೊಳ್ಳುತ್ತಿದೆ. ಜವಳಿ ಸಚಿವಾಲಯದ ಜೊತೆಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಇದರ ಅಡಿಯಲ್ಲಿ ಕರಕುಶಲ ಕರ್ಮಿಗಳಿಂದ ನೇರವಾಗಿ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಕಂಪನಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>