ಹಣದುಬ್ಬರ ದರವು ಹೆಚ್ಚಿನ ಪ್ರಮಾಣದಲ್ಲಿಯೇ ಇರಲಿದ್ದು, ಇದು 2020–21ನೇ ಸಾಲಿನ ದ್ವಿತೀಯಾರ್ಧದಲ್ಲಿ ಕಡಿಮೆ ಆಗಬಹುದು ಎಂದು ಸಮಿತಿಯು ಅಂದಾಜಿಸಿದೆ. ‘ಹಣದುಬ್ಬರದ ವಿಚಾರದಲ್ಲಿ ಅನಿಶ್ಚಿತತೆ ಇದೆ, ಕೋವಿಡ್–19 ಸಾಂಕ್ರಾಮಿಕದಿಂದಾಗಿ ಅರ್ಥವ್ಯವಸ್ಥೆಯು ತೀರಾ ದುರ್ಬಲ ಸ್ಥಿತಿಯಲ್ಲಿದೆ. ಹಾಗಾಗಿ, ಬಡ್ಡಿದರಗಳಲ್ಲಿ ಬದಲಾವಣೆ ಮಾಡದಿರಲು ಸಮಿತಿ ತೀರ್ಮಾನಿಸಿತು’ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದರು.