<p><strong>ನವದೆಹಲಿ</strong>: ಮುಂಗಾರು ಹಂಗಾಮಿನಲ್ಲಿ ದೇಶದಲ್ಲಿ ಅಕ್ಕಿ ಉತ್ಪಾದನೆಯು ದಾಖಲೆಯ 12.45 ಕೋಟಿ ಟನ್ ಆಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿದೆ. ಇದು ಹಿಂದಿನ ವರ್ಷದ ಇದೇ ಅವಧಿಯ ಉತ್ಪಾದನೆಗೆ ಹೋಲಿಸಿದರೆ ಶೇಕಡ 1.4ರಷ್ಟು ಹೆಚ್ಚು.</p>.<p>ಆದರೆ ದ್ವಿದಳ ಧಾನ್ಯಗಳು, ಎಣ್ಣೆಕಾಳುಗಳು ಮತ್ತು ಹತ್ತಿಯ ಉತ್ಪಾದನೆಯು ಕಡಿಮೆ ಆಗಿದೆ. 2025–26ನೇ ವರ್ಷದ ಮುಂಗಾರು ಹಂಗಾಮಿನಲ್ಲಿ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯು 17.33 ಕೋಟಿ ಟನ್ ಆಗಿದೆ ಎಂದು ಸಚಿವಾಲಯ ಸಿದ್ಧಪಡಿಸಿರುವ ಮೊದಲ ಮುಂಗಡ ಅಂದಾಜಿನಲ್ಲಿ ಹೇಳಲಾಗಿದೆ.</p>.<p class="title">ಹಿಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ದೇಶದಲ್ಲಿ 16.95 ಕೋಟಿ ಟನ್ ಆಹಾರ ಧಾನ್ಯ ಉತ್ಪಾದನೆ ಆಗಿತ್ತು. ಹಿಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ಅಕ್ಕಿಯ ಉತ್ಪಾದನೆಯು 12.28 ಕೋಟಿ ಟನ್ಗಳಷ್ಟು ಇತ್ತು.</p>.<p class="title">ಮುಂಗಾರು ಹಂಗಾಮಿನ ಬೆಳೆಗಳನ್ನು ಸೆಪ್ಟೆಂಬರ್–ಅಕ್ಟೋಬರ್ನಲ್ಲಿ ಕೊಯ್ಲು ಮಾಡಲಾಗುತ್ತದೆ. ಅಕ್ಕಿಯು ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿದೆ.</p>.<p class="title">‘ದೇಶದ ಕೆಲವು ಭಾಗಗಳಲ್ಲಿ ಸುರಿದ ಅತಿವೃಷ್ಟಿಯು ಬೆಳೆಗಳಿಗೆ ಹಾನಿ ಉಂಟುಮಾಡಿದೆ. ಆದರೆ ಹೆಚ್ಚಿನ ಪ್ರದೇಶಗಳು ಉತ್ತಮ ಮುಂಗಾರು ಮಳೆಯಿಂದಾಗಿ ಪ್ರಯೋಜನ ಪಡೆದಿವೆ. ಇದರಿಂದಾಗಿ ಒಟ್ಟಾರೆಯಾಗಿ ಬೆಳೆ ಹೆಚ್ಚಾಗಿದೆ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಗಾರು ಹಂಗಾಮಿನಲ್ಲಿ ದೇಶದಲ್ಲಿ ಅಕ್ಕಿ ಉತ್ಪಾದನೆಯು ದಾಖಲೆಯ 12.45 ಕೋಟಿ ಟನ್ ಆಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಹೇಳಿದೆ. ಇದು ಹಿಂದಿನ ವರ್ಷದ ಇದೇ ಅವಧಿಯ ಉತ್ಪಾದನೆಗೆ ಹೋಲಿಸಿದರೆ ಶೇಕಡ 1.4ರಷ್ಟು ಹೆಚ್ಚು.</p>.<p>ಆದರೆ ದ್ವಿದಳ ಧಾನ್ಯಗಳು, ಎಣ್ಣೆಕಾಳುಗಳು ಮತ್ತು ಹತ್ತಿಯ ಉತ್ಪಾದನೆಯು ಕಡಿಮೆ ಆಗಿದೆ. 2025–26ನೇ ವರ್ಷದ ಮುಂಗಾರು ಹಂಗಾಮಿನಲ್ಲಿ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯು 17.33 ಕೋಟಿ ಟನ್ ಆಗಿದೆ ಎಂದು ಸಚಿವಾಲಯ ಸಿದ್ಧಪಡಿಸಿರುವ ಮೊದಲ ಮುಂಗಡ ಅಂದಾಜಿನಲ್ಲಿ ಹೇಳಲಾಗಿದೆ.</p>.<p class="title">ಹಿಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ದೇಶದಲ್ಲಿ 16.95 ಕೋಟಿ ಟನ್ ಆಹಾರ ಧಾನ್ಯ ಉತ್ಪಾದನೆ ಆಗಿತ್ತು. ಹಿಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ಅಕ್ಕಿಯ ಉತ್ಪಾದನೆಯು 12.28 ಕೋಟಿ ಟನ್ಗಳಷ್ಟು ಇತ್ತು.</p>.<p class="title">ಮುಂಗಾರು ಹಂಗಾಮಿನ ಬೆಳೆಗಳನ್ನು ಸೆಪ್ಟೆಂಬರ್–ಅಕ್ಟೋಬರ್ನಲ್ಲಿ ಕೊಯ್ಲು ಮಾಡಲಾಗುತ್ತದೆ. ಅಕ್ಕಿಯು ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿದೆ.</p>.<p class="title">‘ದೇಶದ ಕೆಲವು ಭಾಗಗಳಲ್ಲಿ ಸುರಿದ ಅತಿವೃಷ್ಟಿಯು ಬೆಳೆಗಳಿಗೆ ಹಾನಿ ಉಂಟುಮಾಡಿದೆ. ಆದರೆ ಹೆಚ್ಚಿನ ಪ್ರದೇಶಗಳು ಉತ್ತಮ ಮುಂಗಾರು ಮಳೆಯಿಂದಾಗಿ ಪ್ರಯೋಜನ ಪಡೆದಿವೆ. ಇದರಿಂದಾಗಿ ಒಟ್ಟಾರೆಯಾಗಿ ಬೆಳೆ ಹೆಚ್ಚಾಗಿದೆ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>