ತೈಲ ಸಚಿವ ಹರದೀಪ್ ಸಿಂಗ್ ಪುರಿ ಅವರು ಬುಧವಾರ ಸಂದರ್ಶನವೊಂದರಲ್ಲಿ, ತೈಲೋತ್ಪನ್ನ ಮಾರಾಟ ಕಂಪನಿಗಳು ‘ಒಳ್ಳೆಯ ಕಾರ್ಪೊರೇಟ್ ಪ್ರಜೆಗಳಾಗಿ’ ದರ ಇಳಿಕೆ ಮಾಡಿವೆ ಎಂದು ಹೇಳಿದ್ದಾರೆ. ಬೆಲೆ ಇಳಿಕೆ ನಿರ್ಧಾರಕ್ಕೆ ಪೂರಕವಾಗಿ ಸರ್ಕಾರದ ಕಡೆಯಿಂದ ಸಬ್ಸಿಡಿಯ ನೆರವು ಸಿಗಲಿದೆಯೇ ಎಂಬ ಪ್ರಶ್ನೆಗೆ ಅವರು ನೇರ ಉತ್ತರ ನೀಡಿಲ್ಲ.