ಕಿರು ಹಣಕಾಸು ಸಂಸ್ಥೆಗಳು ಏರ್ಪಡಿಸಿದ್ದ ಆನ್ಲೈನ್ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ‘ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಕಿರು ಹಣಕಾಸು ಸಂಸ್ಥೆಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಸ್ವತಂತ್ರ ಮತ್ತು ಸದೃಢ ಗ್ರಾಮೀಣ ಆರ್ಥಿಕತೆಯು ಹಳ್ಳಿಗಳಿಂದ ನಗರಗಳಿಗೆ ಜನರು ವಲಸೆ ಹೋಗುವುದನ್ನು ತಡೆಗಟ್ಟಲಿದೆ. ಮುಂಬರುವ ವರ್ಷಗಳಲ್ಲಿ ನಗರಗಳಿಂದ ಗ್ರಾಮೀಣ ಪ್ರದೇಶಕ್ಕೆ ವಲಸೆಗೆ ಅವಕಾಶ ಮಾಡಿಕೊಡಲಿದೆ’ ಎಂದು ಹೇಳಿದ್ದಾರೆ.