<p><strong>ಚೆನ್ನೈ:</strong> ಶ್ರೀಪೆರಂಬದೂರಿನಲ್ಲಿ ಇರುವ ಸ್ಯಾಮ್ಸಂಗ್ ಕಂಪನಿಯ ಘಟಕದಲ್ಲಿ ಸಿಐಟಿಯು ಬೆಂಬಲಿತ ಸ್ಯಾಮ್ಸಂಗ್ ಇಂಡಿಯಾ ನೌಕರರ ಒಕ್ಕೂಟದಿಂದ ನಡೆಯುತ್ತಿರುವ ಪ್ರತಿಭಟನೆಯು ಗುರುವಾರ ತೀವ್ರಗೊಂಡಿದೆ.</p>.<p>ಕಾರ್ಖಾನೆಯ ಕಾರ್ಯಾಚರಣೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಕೂಡಲೇ ಮಧ್ಯಪ್ರವೇಶಿಸುವಂತೆ ತಮಿಳುನಾಡು ರಾಜ್ಯ ಸರ್ಕಾರಕ್ಕೆ ಸ್ಯಾಮ್ಸಂಗ್ ಕಂಪನಿಯು ಮನವಿ ಮಾಡಿದೆ.</p>.<p>ಹೋರಾಟದಲ್ಲಿ ತೊಡಗಿದ್ದ ಮೂವರು ನೌಕರರನ್ನು ಕಂಪನಿಯು ಸೇವೆಯಿಂದ ಅಮಾನತುಗೊಳಿಸಿದೆ. ಇದನ್ನು ಖಂಡಿಸಿ ಕೆಲವು ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಕಂಪನಿಯು ಕಾರ್ಮಿಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಬದ್ಧವಾಗಿದೆ. ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ನಮ್ಮ ನೌಕರರ ಸುರಕ್ಷತೆ ಮುಖ್ಯವಾಗಿದೆ. ಕಂಪನಿಯಲ್ಲಿ ಶಿಸ್ತು ಕಾಪಾಡಿಕೊಂಡು ಸುಗಮವಾಗಿ ವ್ಯಾಪಾರ ವಹಿವಾಟು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಸರ್ಕಾರವು ಅಗತ್ಯ ಸಹಕಾರ ನೀಡಬೇಕು ಎಂದು ಪತ್ರದಲ್ಲಿ ಕೋರಿದೆ.</p>.<p class="title">ನೌಕರರು ಕಂಪನಿಯ ನಿಯಮಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂಪನಿ ಹೇಳಿದೆ.</p>.<p class="title">ಕಳೆದ ವರ್ಷ ಕಂಪನಿಯ ಇದೇ ಘಟಕದಲ್ಲಿ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರದ ಮಧ್ಯಪ್ರವೇಶದಿಂದ ಹೋರಾಟವು ಸುಖಾಂತ್ಯ ಕಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಶ್ರೀಪೆರಂಬದೂರಿನಲ್ಲಿ ಇರುವ ಸ್ಯಾಮ್ಸಂಗ್ ಕಂಪನಿಯ ಘಟಕದಲ್ಲಿ ಸಿಐಟಿಯು ಬೆಂಬಲಿತ ಸ್ಯಾಮ್ಸಂಗ್ ಇಂಡಿಯಾ ನೌಕರರ ಒಕ್ಕೂಟದಿಂದ ನಡೆಯುತ್ತಿರುವ ಪ್ರತಿಭಟನೆಯು ಗುರುವಾರ ತೀವ್ರಗೊಂಡಿದೆ.</p>.<p>ಕಾರ್ಖಾನೆಯ ಕಾರ್ಯಾಚರಣೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಕೂಡಲೇ ಮಧ್ಯಪ್ರವೇಶಿಸುವಂತೆ ತಮಿಳುನಾಡು ರಾಜ್ಯ ಸರ್ಕಾರಕ್ಕೆ ಸ್ಯಾಮ್ಸಂಗ್ ಕಂಪನಿಯು ಮನವಿ ಮಾಡಿದೆ.</p>.<p>ಹೋರಾಟದಲ್ಲಿ ತೊಡಗಿದ್ದ ಮೂವರು ನೌಕರರನ್ನು ಕಂಪನಿಯು ಸೇವೆಯಿಂದ ಅಮಾನತುಗೊಳಿಸಿದೆ. ಇದನ್ನು ಖಂಡಿಸಿ ಕೆಲವು ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಕಂಪನಿಯು ಕಾರ್ಮಿಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಬದ್ಧವಾಗಿದೆ. ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ನಮ್ಮ ನೌಕರರ ಸುರಕ್ಷತೆ ಮುಖ್ಯವಾಗಿದೆ. ಕಂಪನಿಯಲ್ಲಿ ಶಿಸ್ತು ಕಾಪಾಡಿಕೊಂಡು ಸುಗಮವಾಗಿ ವ್ಯಾಪಾರ ವಹಿವಾಟು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಸರ್ಕಾರವು ಅಗತ್ಯ ಸಹಕಾರ ನೀಡಬೇಕು ಎಂದು ಪತ್ರದಲ್ಲಿ ಕೋರಿದೆ.</p>.<p class="title">ನೌಕರರು ಕಂಪನಿಯ ನಿಯಮಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂಪನಿ ಹೇಳಿದೆ.</p>.<p class="title">ಕಳೆದ ವರ್ಷ ಕಂಪನಿಯ ಇದೇ ಘಟಕದಲ್ಲಿ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರದ ಮಧ್ಯಪ್ರವೇಶದಿಂದ ಹೋರಾಟವು ಸುಖಾಂತ್ಯ ಕಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>