ಈ ಉದ್ದೇಶಕ್ಕಾಗಿ ₹ 4.26 ಕೋಟಿ ಮೊತ್ತವನ್ನು ಮಂಜೂರು ಮಾಡಲಾಗಿದೆ ಎಂದು ಎಸ್ಬಿಐ ಹೇಳಿದೆ. ‘ಈ ತೀರ್ಮಾನವು ಸುಸ್ಥಿರ ಅಭಿವೃದ್ಧಿ ವಿಚಾರದಲ್ಲಿ ಬ್ಯಾಂಕ್ ಹೊಂದಿರುವ ಬದ್ಧತೆಯನ್ನು ತೋರಿಸುತ್ತದೆ. ಬ್ಯಾಂಕ್ನ ಬೆಂಗಳೂರು ವೃತ್ತದ ಮುಖ್ಯ ಜನರಲ್ ಮ್ಯಾನೇಜರ್ ನಂದಕಿಶೋರ್ ಅವರು ₹ 4.26 ಕೋಟಿ ಮೊತ್ತ ಮಂಜೂರು ಮಾಡಿರುವುದಕ್ಕೆ ಸಂಬಂಧಿಸಿದ ಪತ್ರವನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿದ್ದಾರೆ’ ಎಂದು ಪ್ರಕಟಣೆ ಹೇಳಿದೆ.