<p><strong>ನವದೆಹಲಿ</strong>: ಈ ಹಣಕಾಸು ವರ್ಷದಲ್ಲಿ ಸಾಲ ನೀಡಿಕೆ ಪ್ರಮಾಣವು ಶೇ 14–15ರಷ್ಟು ಹೆಚ್ಚಳ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ನ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಹೇಳಿದ್ದಾರೆ.</p>.<p>ಒಟ್ಟು ಆಂತರಿಕ ಉತ್ಪನ್ನದಲ್ಲಿ ಆಗುವ ಏರಿಕೆ ಮತ್ತು ಹಣದುಬ್ಬರದ ಆಧಾರದಲ್ಲಿ ಸಾಲ ನೀಡಿಕೆ ಪ್ರಮಾಣವನ್ನು ಲೆಕ್ಕ ಹಾಕಲಾಗುತ್ತದೆ. ಹೀಗೆ ಲೆಕ್ಕ ಹಾಕಿದಾಗ ಈ ವರ್ಷದ ಪ್ರಗತಿಯು ಶೇ 14ರಷ್ಟಿರಬಹುದು ಎಂದು ಅಂದಾಜಿಸಿದ್ದೇವೆ. ಸಾಲ ನೀಡುವುದಕ್ಕೆ ಇರುವ ಅವಕಾಶಗಳ ಮೇಲೆ ಕೂಡ ಈ ಪ್ರಗತಿ ಅವಲಂಬಿತವಾಗಿದೆ. ಈ ಪ್ರಮಾಣದ ಬೆಳವಣಿಗೆಯು ಅಪಾಯವನ್ನು ಎದುರಿಸುವ ನಮ್ಮ ಸಾಮರ್ಥ್ಯದ ಮಿತಿಯೊಳಗೇ ಇದೆ ಎಂದು ಅವರು ವಿವರಿಸಿದ್ದಾರೆ. </p>.<p>ಠೇವಣಿಯು ಶೇ 11ರ ಪ್ರಮಾಣದಲ್ಲಿ ಬೆಳೆಯಬಹುದು ಎಂಬ ಅಂದಾಜು ಇದೆ ಎಂದು ಅವರು ಹೇಳಿದ್ದಾರೆ. </p>.<p>ಬ್ಯಾಂಕ್ ಹೊಂದಿರುವ ಹೆಚ್ಚುವರಿ ನಗದು ಮೀಸಲು ಅನುಪಾತವು (ಎಸ್ಎಲ್ಆರ್) ₹3.5 ಲಕ್ಷ ಕೋಟಿಯಿಂದ ₹4 ಲಕ್ಷ ಕೊಟಿಯಷ್ಟು ಇದೆ. ನಮ್ಮ ಸಾಲ-ಠೇವಣಿ ಅನುಪಾತವು ಶೇ 68-69ರಷ್ಟಿದೆ. ಹಾಗಾಗಿ ಸಾಲ ನೀಡಿಕೆಯನ್ನು ಹೆಚ್ಚಿಸಲು ಸಾಕಷ್ಟು ಅವಕಾಶ ಇದೆ ಎಂದು ಅವರು ಹೇಳಿದ್ದಾರೆ. </p>.<p>‘ನಾವು ಯಾವಾಗಲೂ ಠೇವಣಿಗಳಿಗೆ ಪ್ರಾಮುಖ್ಯತೆ ನೀಡುತ್ತೇವೆ. ಅದಕ್ಕಾಗಿಯೇ ಇತ್ತೀಚೆಗೆ ಅಲ್ಪಾವಧಿಯ ಠೇವಣಿಗಳ ಬಡ್ಡಿದರವನ್ನು ಹೆಚ್ಚಿಸಿದ್ದೇವೆ. ಈ ವರ್ಷದಲ್ಲಿ ನಾವು ಕನಿಷ್ಠ ಶೇ 12-13ರಷ್ಟು ಬೆಳೆಯಬೇಕು ಎಂಬುದು ನಮ್ಮ ಪ್ರಯತ್ನವಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಈ ಹಣಕಾಸು ವರ್ಷದಲ್ಲಿ ಸಾಲ ನೀಡಿಕೆ ಪ್ರಮಾಣವು ಶೇ 14–15ರಷ್ಟು ಹೆಚ್ಚಳ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ನ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಹೇಳಿದ್ದಾರೆ.</p>.<p>ಒಟ್ಟು ಆಂತರಿಕ ಉತ್ಪನ್ನದಲ್ಲಿ ಆಗುವ ಏರಿಕೆ ಮತ್ತು ಹಣದುಬ್ಬರದ ಆಧಾರದಲ್ಲಿ ಸಾಲ ನೀಡಿಕೆ ಪ್ರಮಾಣವನ್ನು ಲೆಕ್ಕ ಹಾಕಲಾಗುತ್ತದೆ. ಹೀಗೆ ಲೆಕ್ಕ ಹಾಕಿದಾಗ ಈ ವರ್ಷದ ಪ್ರಗತಿಯು ಶೇ 14ರಷ್ಟಿರಬಹುದು ಎಂದು ಅಂದಾಜಿಸಿದ್ದೇವೆ. ಸಾಲ ನೀಡುವುದಕ್ಕೆ ಇರುವ ಅವಕಾಶಗಳ ಮೇಲೆ ಕೂಡ ಈ ಪ್ರಗತಿ ಅವಲಂಬಿತವಾಗಿದೆ. ಈ ಪ್ರಮಾಣದ ಬೆಳವಣಿಗೆಯು ಅಪಾಯವನ್ನು ಎದುರಿಸುವ ನಮ್ಮ ಸಾಮರ್ಥ್ಯದ ಮಿತಿಯೊಳಗೇ ಇದೆ ಎಂದು ಅವರು ವಿವರಿಸಿದ್ದಾರೆ. </p>.<p>ಠೇವಣಿಯು ಶೇ 11ರ ಪ್ರಮಾಣದಲ್ಲಿ ಬೆಳೆಯಬಹುದು ಎಂಬ ಅಂದಾಜು ಇದೆ ಎಂದು ಅವರು ಹೇಳಿದ್ದಾರೆ. </p>.<p>ಬ್ಯಾಂಕ್ ಹೊಂದಿರುವ ಹೆಚ್ಚುವರಿ ನಗದು ಮೀಸಲು ಅನುಪಾತವು (ಎಸ್ಎಲ್ಆರ್) ₹3.5 ಲಕ್ಷ ಕೋಟಿಯಿಂದ ₹4 ಲಕ್ಷ ಕೊಟಿಯಷ್ಟು ಇದೆ. ನಮ್ಮ ಸಾಲ-ಠೇವಣಿ ಅನುಪಾತವು ಶೇ 68-69ರಷ್ಟಿದೆ. ಹಾಗಾಗಿ ಸಾಲ ನೀಡಿಕೆಯನ್ನು ಹೆಚ್ಚಿಸಲು ಸಾಕಷ್ಟು ಅವಕಾಶ ಇದೆ ಎಂದು ಅವರು ಹೇಳಿದ್ದಾರೆ. </p>.<p>‘ನಾವು ಯಾವಾಗಲೂ ಠೇವಣಿಗಳಿಗೆ ಪ್ರಾಮುಖ್ಯತೆ ನೀಡುತ್ತೇವೆ. ಅದಕ್ಕಾಗಿಯೇ ಇತ್ತೀಚೆಗೆ ಅಲ್ಪಾವಧಿಯ ಠೇವಣಿಗಳ ಬಡ್ಡಿದರವನ್ನು ಹೆಚ್ಚಿಸಿದ್ದೇವೆ. ಈ ವರ್ಷದಲ್ಲಿ ನಾವು ಕನಿಷ್ಠ ಶೇ 12-13ರಷ್ಟು ಬೆಳೆಯಬೇಕು ಎಂಬುದು ನಮ್ಮ ಪ್ರಯತ್ನವಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>