‘ಪುನಶ್ಚೇತನ ಯೋಜನೆಯ ಕುರಿತಾಗಿ ನಮ್ಮ ಕಾನೂನು ತಜ್ಞರ ತಂಡ ಪರಿಶೀಲನೆ ನಡೆಸುತ್ತಿದೆ. ಅದು ಪೂರ್ಣಗೊಂಡ ಬಳಿಕ ಸೋಮವಾರ ಆರ್ಬಿಐಗೆ ನಮ್ಮ ಸಲಹೆ ಮತ್ತು ಪ್ರತಿಕ್ರಿಯೆ ನೀಡಲಾಗುವುದು. ಆರ್ಬಿಐ, ಬ್ಯಾಂಕ್ಗೆ ವಿಧಿಸಿರುವ 30 ದಿನಗಳ ನಿರ್ಬಂಧ ಮುಗಿಯುವುದರ ಒಳಗಾಗಿ ಯೋಜನೆಗೆ ಅನುಮತಿ ಪಡೆದು, ಜಾರಿಗೊಳಿಸಲು ಪ್ರಯತ್ನಿಸಲಾಗುವುದು’ಎಂದು ಎಸ್ಬಿಐ ಅಧ್ಯಕ್ಷ ರಜನೀಶ್ ಕುಮಾರ್ ತಿಳಿಸಿದ್ದಾರೆ.