<p><strong>ಬೆಂಗಳೂರು</strong>: ನವೋದ್ಯಮಗಳಿಗೆ ಹಣಕಾಸಿನ ನೆರವು ಒದಗಿಸಲು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಜೊತೆ ಒಪ್ಪಂದ ಮಾಡಿಕೊಂಡಿದೆ. ಇದರ ಭಾಗವಾಗಿ ಎಸ್ಬಿಐ, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿನ ‘ಇನ್ನೊವೇಷನ್ ಟವರ್’ನಲ್ಲಿ ಪ್ರತ್ಯೇಕ ‘ಸ್ಟಾರ್ಟ್ಅಪ್ ಡೆಸ್ಕ್’ ಆರಂಭಿಸಲಿದೆ.</p>.<p>ಮುಂದಿನ ದಿನಗಳಲ್ಲಿ ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿ–ಬೆಳಗಾವಿ ಕ್ಲಸ್ಟರ್ಗಳಲ್ಲಿ ನವೋದ್ಯಮಗಳಿಗೆ ಹಣಕಾಸಿನ ನೆರವು ಒದಗಿಸುವ ಪ್ರತ್ಯೇಕ ಶಾಖೆಗಳನ್ನು ಆರಂಭಿಸಲು ಎಸ್ಬಿಐಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಹಾಯ ಮಾಡಲಿದೆ.</p>.<p>ರಾಜ್ಯ ಐ.ಟಿ. ಮತ್ತು ಬಿ.ಟಿ. ಸಚಿವ ಸಿ.ಎನ್. ಅಶ್ವತ್ಥನಾರಾಯಣ, ಎಸ್ಬಿಐ ಉಪ ವ್ಯವಸ್ಥಾಪಕ ನಿರ್ದೇಶಕ ರಾಣಾ ಅಶುತೋಷ್ ಕುಮಾರ್ ಸಿಂಗ್ ಸಮ್ಮುಖದಲ್ಲಿ ಈ ವಿಚಾರವಾಗಿ ಕೆಡಿಇಎಂ ಮತ್ತು ಎಸ್ಬಿಐ ನಡುವೆ ಶುಕ್ರವಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ನವೋದ್ಯಮಗಳನ್ನು ಗುರಿಯಾಗಿಸಿಕೊಂಡು ಬ್ಯಾಂಕಿಂಗ್ ಸಂಸ್ಥೆಯೊಂದು ಈ ಬಗೆಯ ಒಪ್ಪಂದಕ್ಕೆ ಮಾಡಿಕೊಂಡಿರುವುದು ಇದೇ ಮೊದಲು ಎಂದು ಕೆಡಿಇಎಂ ಮತ್ತು ಎಸ್ಬಿಐ ಜಂಟಿ ಹೇಳಿಕೆ ತಿಳಿಸಿದೆ.</p>.<p>ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ, ಕೆಡಿಇಎಂ ಬೆಂಬಲ ಇರುವ ನವೋದ್ಯಮಗಳಿಗೆ ಸಾಲ ಸೇರಿದಂತೆ ಇತರ ಹಣಕಾಸಿನ ನೆರವು ಒದಗಿಸುವ ವ್ಯವಸ್ಥೆಯನ್ನು ಕಟ್ಟಲು ಈ ಒಪ್ಪಂದದಿಂದಾಗಿ ಎಸ್ಬಿಐಗೆ ಸಾಧ್ಯವಾಗಲಿದೆ. ಒಪ್ಪಂದ ಕಾರಣದಿಂದಾಗಿ ಒಂದು ಸಾವಿರಕ್ಕೂ ಹೆಚ್ಚಿನ ನವೋದ್ಯಮಗಳಿಗೆ ನೆರವು ಸಿಗುವ ನಿರೀಕ್ಷೆ ಇದೆ.</p>.<p>‘ತಂತ್ರಜ್ಞಾನ ಕ್ಲಸ್ಟರ್ಗಳಾದ ಮಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಮೂರರಿಂದ ಆರು ತಿಂಗಳುಗಳಲ್ಲಿ ನವೋದ್ಯಮಗಳಿಗಾಗಿ ಶಾಖೆ ಆರಂಭಿಸಲು ಎಸ್ಬಿಐ ಆಸಕ್ತಿ ತೋರಿಸಿದೆ’ ಎಂದು ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಹೇಳಿದರು.</p>.<p>‘ಕೋರಮಂಗಲದಲ್ಲಿ ಶಾಖೆ’: ‘ನವೋದ್ಯಮಗಳಿಗೆ ಸುಲಭವಾಗಿ ಸಾಲ ಒದಗಿಸಲು ಪ್ರತ್ಯೇಕ ಶಾಖೆಯನ್ನು ಎಸ್ಬಿಐ ಬೆಂಗಳೂರಿನ ಕೋರಮಂಗಲದಲ್ಲಿ ಆರಂಭಿಸಲಿದೆ. ಇದು ಆಗಸ್ಟ್ ತಿಂಗಳಲ್ಲಿ ಆರಂಭವಾಗಲಿದೆ’ ಎಂದು ಐ.ಟಿ. ಮತ್ತು ಬಿ.ಟಿ. ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>'ಕೇಂದ್ರ ಸರ್ಕಾರವು ಅತಿಸಣ್ಣ ಮತ್ತು ಸಣ್ಣ ಉದ್ದಿಮೆಗಳಿಗೆ ಸಾಲ ಸೌಲಭ್ಯ ಖಾತರಿಪಡಿಸಲು ರೂಪಿಸಿರುವ ಸಿಜಿಟಿಎಸ್ಎಂಇ ಯೋಜನೆಯ ಅಡಿ ಒಂದು ಉದ್ದಿಮೆಗೆ ₹ 2 ಕೋಟಿವರೆಗೂ ಸಾಲ ಸಿಗುತ್ತಿದೆ. ಇದನ್ನು ಬಳಸಿಕೊಂಡು, ರಾಜ್ಯದಲ್ಲಿ ನವೋದ್ಯಮಗಳಿಗೆ ಹಣಕಾಸಿನ ನೆರವು ಒದಗಿಸಲು ತೀರ್ಮಾನ ಮಾಡಲಾಗಿದೆ’ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>‘ಕರ್ನಾಟಕ ಸರ್ಕಾರದ ಮಾದರಿಯಲ್ಲಿಯೇ ಇತರ ರಾಜ್ಯಗಳೂ ಮುಂದಡಿ ಇರಿಸಿದರೆ, ಇದೇ ಸೌಲಭ್ಯವನ್ನು ಅಲ್ಲಿಯೂ ಆರಂಭಿಸಬಹುದು’ ಎಂದು ರಾಣಾ ಆಶುತೋಷ್ ಕುಮಾರ್ ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನವೋದ್ಯಮಗಳಿಗೆ ಹಣಕಾಸಿನ ನೆರವು ಒದಗಿಸಲು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಜೊತೆ ಒಪ್ಪಂದ ಮಾಡಿಕೊಂಡಿದೆ. ಇದರ ಭಾಗವಾಗಿ ಎಸ್ಬಿಐ, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿನ ‘ಇನ್ನೊವೇಷನ್ ಟವರ್’ನಲ್ಲಿ ಪ್ರತ್ಯೇಕ ‘ಸ್ಟಾರ್ಟ್ಅಪ್ ಡೆಸ್ಕ್’ ಆರಂಭಿಸಲಿದೆ.</p>.<p>ಮುಂದಿನ ದಿನಗಳಲ್ಲಿ ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿ–ಬೆಳಗಾವಿ ಕ್ಲಸ್ಟರ್ಗಳಲ್ಲಿ ನವೋದ್ಯಮಗಳಿಗೆ ಹಣಕಾಸಿನ ನೆರವು ಒದಗಿಸುವ ಪ್ರತ್ಯೇಕ ಶಾಖೆಗಳನ್ನು ಆರಂಭಿಸಲು ಎಸ್ಬಿಐಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಹಾಯ ಮಾಡಲಿದೆ.</p>.<p>ರಾಜ್ಯ ಐ.ಟಿ. ಮತ್ತು ಬಿ.ಟಿ. ಸಚಿವ ಸಿ.ಎನ್. ಅಶ್ವತ್ಥನಾರಾಯಣ, ಎಸ್ಬಿಐ ಉಪ ವ್ಯವಸ್ಥಾಪಕ ನಿರ್ದೇಶಕ ರಾಣಾ ಅಶುತೋಷ್ ಕುಮಾರ್ ಸಿಂಗ್ ಸಮ್ಮುಖದಲ್ಲಿ ಈ ವಿಚಾರವಾಗಿ ಕೆಡಿಇಎಂ ಮತ್ತು ಎಸ್ಬಿಐ ನಡುವೆ ಶುಕ್ರವಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು. ನವೋದ್ಯಮಗಳನ್ನು ಗುರಿಯಾಗಿಸಿಕೊಂಡು ಬ್ಯಾಂಕಿಂಗ್ ಸಂಸ್ಥೆಯೊಂದು ಈ ಬಗೆಯ ಒಪ್ಪಂದಕ್ಕೆ ಮಾಡಿಕೊಂಡಿರುವುದು ಇದೇ ಮೊದಲು ಎಂದು ಕೆಡಿಇಎಂ ಮತ್ತು ಎಸ್ಬಿಐ ಜಂಟಿ ಹೇಳಿಕೆ ತಿಳಿಸಿದೆ.</p>.<p>ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ, ಕೆಡಿಇಎಂ ಬೆಂಬಲ ಇರುವ ನವೋದ್ಯಮಗಳಿಗೆ ಸಾಲ ಸೇರಿದಂತೆ ಇತರ ಹಣಕಾಸಿನ ನೆರವು ಒದಗಿಸುವ ವ್ಯವಸ್ಥೆಯನ್ನು ಕಟ್ಟಲು ಈ ಒಪ್ಪಂದದಿಂದಾಗಿ ಎಸ್ಬಿಐಗೆ ಸಾಧ್ಯವಾಗಲಿದೆ. ಒಪ್ಪಂದ ಕಾರಣದಿಂದಾಗಿ ಒಂದು ಸಾವಿರಕ್ಕೂ ಹೆಚ್ಚಿನ ನವೋದ್ಯಮಗಳಿಗೆ ನೆರವು ಸಿಗುವ ನಿರೀಕ್ಷೆ ಇದೆ.</p>.<p>‘ತಂತ್ರಜ್ಞಾನ ಕ್ಲಸ್ಟರ್ಗಳಾದ ಮಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಮೂರರಿಂದ ಆರು ತಿಂಗಳುಗಳಲ್ಲಿ ನವೋದ್ಯಮಗಳಿಗಾಗಿ ಶಾಖೆ ಆರಂಭಿಸಲು ಎಸ್ಬಿಐ ಆಸಕ್ತಿ ತೋರಿಸಿದೆ’ ಎಂದು ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಹೇಳಿದರು.</p>.<p>‘ಕೋರಮಂಗಲದಲ್ಲಿ ಶಾಖೆ’: ‘ನವೋದ್ಯಮಗಳಿಗೆ ಸುಲಭವಾಗಿ ಸಾಲ ಒದಗಿಸಲು ಪ್ರತ್ಯೇಕ ಶಾಖೆಯನ್ನು ಎಸ್ಬಿಐ ಬೆಂಗಳೂರಿನ ಕೋರಮಂಗಲದಲ್ಲಿ ಆರಂಭಿಸಲಿದೆ. ಇದು ಆಗಸ್ಟ್ ತಿಂಗಳಲ್ಲಿ ಆರಂಭವಾಗಲಿದೆ’ ಎಂದು ಐ.ಟಿ. ಮತ್ತು ಬಿ.ಟಿ. ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>'ಕೇಂದ್ರ ಸರ್ಕಾರವು ಅತಿಸಣ್ಣ ಮತ್ತು ಸಣ್ಣ ಉದ್ದಿಮೆಗಳಿಗೆ ಸಾಲ ಸೌಲಭ್ಯ ಖಾತರಿಪಡಿಸಲು ರೂಪಿಸಿರುವ ಸಿಜಿಟಿಎಸ್ಎಂಇ ಯೋಜನೆಯ ಅಡಿ ಒಂದು ಉದ್ದಿಮೆಗೆ ₹ 2 ಕೋಟಿವರೆಗೂ ಸಾಲ ಸಿಗುತ್ತಿದೆ. ಇದನ್ನು ಬಳಸಿಕೊಂಡು, ರಾಜ್ಯದಲ್ಲಿ ನವೋದ್ಯಮಗಳಿಗೆ ಹಣಕಾಸಿನ ನೆರವು ಒದಗಿಸಲು ತೀರ್ಮಾನ ಮಾಡಲಾಗಿದೆ’ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>‘ಕರ್ನಾಟಕ ಸರ್ಕಾರದ ಮಾದರಿಯಲ್ಲಿಯೇ ಇತರ ರಾಜ್ಯಗಳೂ ಮುಂದಡಿ ಇರಿಸಿದರೆ, ಇದೇ ಸೌಲಭ್ಯವನ್ನು ಅಲ್ಲಿಯೂ ಆರಂಭಿಸಬಹುದು’ ಎಂದು ರಾಣಾ ಆಶುತೋಷ್ ಕುಮಾರ್ ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>