<p><strong>ನವದೆಹಲಿ</strong>: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಿನಲ್ಲಿಯೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾರ್ಯವೆಸಗುತ್ತಿರುವುದನ್ನು ವಿರೋಧಿಸಿ ಬ್ಯಾಂಕ್ ನೌಕರರು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಪೋಸ್ಟ್ ಹಾಕಬಾರದು ಎಂದು ಎಸ್ಬಿಐ ಎಚ್ಚರಿಕೆ ನೀಡಿದೆ.</p>.<p>ಬ್ಯಾಂಕ್ ಕಾರ್ಯಗಳ ವಿರುದ್ಧ, ಅದರ ನಿರ್ವಹಣೆ ಮತ್ತು ನೀತಿಗಳ ವಿರುದ್ಧ ಬ್ಯಾಂಕ್ ನೌಕರರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಯಾಂಕ್ ಎಲ್ಲ ವಲಯದ ಮುಖ್ಯ ವ್ಯವಸ್ಥಾಪಕರಿಗೆ ಪತ್ರ ಬರೆದಿದೆ.</p>.<p>ಕೋವಿಡ್-19 ಲಾಕ್ಡೌನ್ ಹೊತ್ತಲ್ಲಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳು ಕಾರ್ಯವೆಸಗುತ್ತಿರುವನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವುದನ್ನು ನಾವು ನೋಡಿದ್ದೇವೆ.ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಬ್ಯಾಂಕ್ನ ಕಾರ್ಯಗಳನ್ನು ಶ್ಲಾಘಿಸಬೇಕಿದೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಆದಾಗ್ಯೂ, ಬ್ಯಾಂಕ್ ಮತ್ತು ಅಲ್ಲಿನ ಹಿರಿಯ ಮ್ಯಾನೇಜರ್ ಬಗ್ಗೆ ಅವಮಾನಕರವಾದ ಪೋಸ್ಟ್ ಹಾಕಿದ್ದ ಪಶ್ಚಿಮ ಬಂಗಾಳದ ಇಬ್ಬರು ನೌಕರರ ವಿರುದ್ಧ ಬ್ಯಾಂಕ್ ಕ್ರಮಕೈಗೊಂಡಿದೆ.</p>.<p>ಬ್ಯಾಂಕ್ ಈ ರೀತಿ ಪ್ರಕಟಣೆ ಹೊರಡಿಸಿರುವ ಬಗ್ಗೆಯೂ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಎಂದು ಎಸ್ಬಿಐ ನೌಕರರು ಹೇಳಿದ್ದಾರೆ.</p>.<p>ಪ್ರಜಾಪ್ರಭುತ್ವವಿರುವ ದೇಶದ ಪ್ರಜೆಯಾಗಿರುವ ನನಗೆ ನನ್ನ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ದಾಖಲಿಸುವ ಹಕ್ಕು ಇದೆ. ಬ್ಯಾಂಕ್ ಹೊರಡಿಸಿರುವ ಈ ಪ್ರಕಟಣೆ ಸಂವಿಧಾನದ 19ನೇ ವಿಧಿಯನ್ನು ಉಲ್ಲಂಘಿಸಿದೆ ಎಂದು ಹೆಸರು ಹೇಳಲು ಇಚ್ಛಿಸದ ನೌಕರರೊಬ್ಬರ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಿನಲ್ಲಿಯೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾರ್ಯವೆಸಗುತ್ತಿರುವುದನ್ನು ವಿರೋಧಿಸಿ ಬ್ಯಾಂಕ್ ನೌಕರರು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಪೋಸ್ಟ್ ಹಾಕಬಾರದು ಎಂದು ಎಸ್ಬಿಐ ಎಚ್ಚರಿಕೆ ನೀಡಿದೆ.</p>.<p>ಬ್ಯಾಂಕ್ ಕಾರ್ಯಗಳ ವಿರುದ್ಧ, ಅದರ ನಿರ್ವಹಣೆ ಮತ್ತು ನೀತಿಗಳ ವಿರುದ್ಧ ಬ್ಯಾಂಕ್ ನೌಕರರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಯಾಂಕ್ ಎಲ್ಲ ವಲಯದ ಮುಖ್ಯ ವ್ಯವಸ್ಥಾಪಕರಿಗೆ ಪತ್ರ ಬರೆದಿದೆ.</p>.<p>ಕೋವಿಡ್-19 ಲಾಕ್ಡೌನ್ ಹೊತ್ತಲ್ಲಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳು ಕಾರ್ಯವೆಸಗುತ್ತಿರುವನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವುದನ್ನು ನಾವು ನೋಡಿದ್ದೇವೆ.ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಬ್ಯಾಂಕ್ನ ಕಾರ್ಯಗಳನ್ನು ಶ್ಲಾಘಿಸಬೇಕಿದೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಆದಾಗ್ಯೂ, ಬ್ಯಾಂಕ್ ಮತ್ತು ಅಲ್ಲಿನ ಹಿರಿಯ ಮ್ಯಾನೇಜರ್ ಬಗ್ಗೆ ಅವಮಾನಕರವಾದ ಪೋಸ್ಟ್ ಹಾಕಿದ್ದ ಪಶ್ಚಿಮ ಬಂಗಾಳದ ಇಬ್ಬರು ನೌಕರರ ವಿರುದ್ಧ ಬ್ಯಾಂಕ್ ಕ್ರಮಕೈಗೊಂಡಿದೆ.</p>.<p>ಬ್ಯಾಂಕ್ ಈ ರೀತಿ ಪ್ರಕಟಣೆ ಹೊರಡಿಸಿರುವ ಬಗ್ಗೆಯೂ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಎಂದು ಎಸ್ಬಿಐ ನೌಕರರು ಹೇಳಿದ್ದಾರೆ.</p>.<p>ಪ್ರಜಾಪ್ರಭುತ್ವವಿರುವ ದೇಶದ ಪ್ರಜೆಯಾಗಿರುವ ನನಗೆ ನನ್ನ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ದಾಖಲಿಸುವ ಹಕ್ಕು ಇದೆ. ಬ್ಯಾಂಕ್ ಹೊರಡಿಸಿರುವ ಈ ಪ್ರಕಟಣೆ ಸಂವಿಧಾನದ 19ನೇ ವಿಧಿಯನ್ನು ಉಲ್ಲಂಘಿಸಿದೆ ಎಂದು ಹೆಸರು ಹೇಳಲು ಇಚ್ಛಿಸದ ನೌಕರರೊಬ್ಬರ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>