ನ್ಯಾಯಮೂರ್ತಿಗಳಾದ ಎಸ್.ಎ. ನಜೀರ್ ಮತ್ತು ಸಂಜೀವ್ ಖನ್ನಾ ಅವರಿದ್ದ ವಿಭಾಗೀಯ ಪೀಠವು, ಹೂಡಿಕೆದಾರರು ಈ ಆರು ಫಂಡ್ಗಳಲ್ಲಿ ಮಾಡಿರುವ ಹೂಡಿಕೆಯ ಪ್ರಮಾಣಕ್ಕೆ ಅನುಗುಣವಾಗಿ ಮರುಪಾವತಿ ಆಗಬೇಕು ಎಂದು ಸೂಚಿಸಿದೆ. ಹಣವನ್ನು ಹೂಡಿಕೆದಾರರಿಗೆ ಮರಳಿಸುವ ಜವಾಬ್ದಾರಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮ್ಯೂಚುವಲ್ ಫಂಡ್ ಕಂಪನಿಗೆ ವಹಿಸಲಾಗಿದೆ.