ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, ‘ತನ್ನ ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಅದಾನಿ ಸಮೂಹದ ಕೆಲವು ಕಂಪನಿಗಳ ವಿರುದ್ಧ ಸೆಬಿ ತನಿಖೆ ನಡೆಸುತ್ತಿದೆ’ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ವಿವರವನ್ನು ಅವರು ನೀಡಿಲ್ಲ. ತನಗೆ ಸಂಬಂಧಿಸಿದ ಕಾನೂನುಗಳ ವಿಚಾರದಲ್ಲಿ ಡಿಆರ್ಐ, ಅದಾನಿ ಸಮೂಹದ ಕೆಲವು ಕಂಪನಿಗಳ ವಿರುದ್ಧ ತನಿಖೆ ನಡೆಸುತ್ತಿದೆ ಎಂದೂ ಅವರು ತಿಳಿಸಿದ್ದಾರೆ.