<p><strong>ನವದೆಹಲಿ:</strong> ಇಂಧನ ಚಿಲ್ಲರೆ ವಹಿವಾಟಿನಿಂದ ಖಾಸಗಿ ಕಂಪನಿಗಳಿಗೆ ನಷ್ಟವಾಗುತ್ತಿದೆ. ಇದರಿಂದಾಗಿ ಚಿಲ್ಲರೆ ವಹಿವಾಟಿನಲ್ಲಿ ಬಂಡವಾಳ ಹೂಡಿಕೆ ಕಡಿಮೆ ಆಗಲಿದೆ ಎಂದು ಖಾಸಗಿ ಕಂಪನಿಗಳನ್ನು ಪ್ರತಿನಿಧಿಸುವ ಫೆಡರೇಷನ್ ಆಫ್ ಇಂಡಿಯನ್ ಪೆಟ್ರೋಲಿಯಂ ಇಂಡಸ್ಟ್ರಿ (ಎಫ್ಐಪಿಐ) ಹೇಳಿದೆ.</p>.<p>ಈ ಸಂಬಂಧ ಈಚೆಗಷ್ಟೇ ಪೆಟ್ರೋಲಿಯಂ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಇಂಧನ ದರ ಹೆಚ್ಚಳ ಮಾಡದೇ ಇರುವುದರಿಂದ ಖಾಸಗಿ ಕಂಪನಿಗಳಿಗೆ ನಷ್ಟ ಆಗುತ್ತಿದೆ. ಜಿಯೊ–ಬಿಪಿ ಮತ್ತು ನಯಾರಾ ಎನರ್ಜಿಯಂತಹ ಖಾಸಗಿ ಕಂಪನಿಗಳಿಗೆ ಪ್ರತಿ ಲೀಟರ್ ಡೀಸೆಲ್ ಮಾರಾಟದಿಂದ ₹ 20 ರಿಂದ ₹ 25 ಮತ್ತು ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಿಂದ ₹ 14–18 ನಷ್ಟ ಆಗುತ್ತಿದೆ ಎಂದು ತಿಳಿಸಿದೆ. ಹೂಡಿಕೆಗೆ ಸೂಕ್ತ ವಾತಾವರಣ ಕಲ್ಪಿಸಲು ಮಧ್ಯಪ್ರವೇಶ ಮಾಡುವಂತೆ ಸಚಿವಾಲಯವನ್ನು ಒತ್ತಾಯಿಸಿದೆ.</p>.<p>ಖಾಸಗಿಕ ಕಂಪನಿಗಳು ದರ ಹೆಚ್ಚಿಸುವ ಇಲ್ಲವೇ ಮಾರಾಟ ತಗ್ಗಿಸುವ ಮೂಲಕ ನಷ್ಟವನ್ನು ಕಡಿಮೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಂಧನ ಚಿಲ್ಲರೆ ವಹಿವಾಟಿನಿಂದ ಖಾಸಗಿ ಕಂಪನಿಗಳಿಗೆ ನಷ್ಟವಾಗುತ್ತಿದೆ. ಇದರಿಂದಾಗಿ ಚಿಲ್ಲರೆ ವಹಿವಾಟಿನಲ್ಲಿ ಬಂಡವಾಳ ಹೂಡಿಕೆ ಕಡಿಮೆ ಆಗಲಿದೆ ಎಂದು ಖಾಸಗಿ ಕಂಪನಿಗಳನ್ನು ಪ್ರತಿನಿಧಿಸುವ ಫೆಡರೇಷನ್ ಆಫ್ ಇಂಡಿಯನ್ ಪೆಟ್ರೋಲಿಯಂ ಇಂಡಸ್ಟ್ರಿ (ಎಫ್ಐಪಿಐ) ಹೇಳಿದೆ.</p>.<p>ಈ ಸಂಬಂಧ ಈಚೆಗಷ್ಟೇ ಪೆಟ್ರೋಲಿಯಂ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಇಂಧನ ದರ ಹೆಚ್ಚಳ ಮಾಡದೇ ಇರುವುದರಿಂದ ಖಾಸಗಿ ಕಂಪನಿಗಳಿಗೆ ನಷ್ಟ ಆಗುತ್ತಿದೆ. ಜಿಯೊ–ಬಿಪಿ ಮತ್ತು ನಯಾರಾ ಎನರ್ಜಿಯಂತಹ ಖಾಸಗಿ ಕಂಪನಿಗಳಿಗೆ ಪ್ರತಿ ಲೀಟರ್ ಡೀಸೆಲ್ ಮಾರಾಟದಿಂದ ₹ 20 ರಿಂದ ₹ 25 ಮತ್ತು ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಿಂದ ₹ 14–18 ನಷ್ಟ ಆಗುತ್ತಿದೆ ಎಂದು ತಿಳಿಸಿದೆ. ಹೂಡಿಕೆಗೆ ಸೂಕ್ತ ವಾತಾವರಣ ಕಲ್ಪಿಸಲು ಮಧ್ಯಪ್ರವೇಶ ಮಾಡುವಂತೆ ಸಚಿವಾಲಯವನ್ನು ಒತ್ತಾಯಿಸಿದೆ.</p>.<p>ಖಾಸಗಿಕ ಕಂಪನಿಗಳು ದರ ಹೆಚ್ಚಿಸುವ ಇಲ್ಲವೇ ಮಾರಾಟ ತಗ್ಗಿಸುವ ಮೂಲಕ ನಷ್ಟವನ್ನು ಕಡಿಮೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>