<p><strong>ಬೆಂಗಳೂರು /ಮುಂಬೈ:</strong> ಪಶ್ಚಿಮ ಏಷ್ಯಾದ ಸಂಘರ್ಷದಿಂದ ಶುಕ್ರವಾರದ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಶೇ 2ಕ್ಕೂ ಹೆಚ್ಚು ಕುಸಿತ ಕಂಡಿದ್ದು, ಕರಡಿ ಕುಣಿತಕ್ಕೆ ಷೇರುಪೇಟೆಯು ತತ್ತರಿಸಿದೆ. </p>.<p>ಕಚ್ಚಾ ತೈಲದ ಬೆಲೆ ಏರಿಕೆ, ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಮತ್ತು ವಿದೇಶಿ ಬಂಡವಾಳದ ನಿರಂತರ ಹೊರಹರಿವು ದೇಶದ ಷೇರುಪೇಟೆ ಸೂಚ್ಯಂಕಗಳ ಇಳಿಕೆಗೆ ಕಾರಣವಾಗಿವೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.</p>.<p>ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,690 ಅಂಶ (ಶೇ 2.25ರಷ್ಟು) ಇಳಿಕೆಯಾಗಿ, 73,583ಕ್ಕೆ ವಹಿವಾಟು ಅಂತ್ಯಗೊಂಡಿದೆ. ದಿನದ ವಹಿವಾಟಿನ ವೇಳೆ ಸೆನ್ಸೆಕ್ಸ್ 1,739 ಅಂಶ ಕುಸಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 486 ಅಂಶ (ಶೇ 2.09ರಷ್ಟು) ಕಡಿಮೆಯಾಗಿ, 22,819ಕ್ಕೆ ಅಂತ್ಯಗೊಂಡಿದೆ. </p>.<p>ಷೇರುಪೇಟೆ ಸೂಚ್ಯಂಕಗಳ ಇಳಿಕೆಯಿಂದ ಹೂಡಿಕೆದಾರರ ಸಂಪತ್ತು ₹8.86 ಲಕ್ಷ ಕೋಟಿ ಕರಗಿದೆ. ಬಿಎಸ್ಇ ನೋಂದಾಯಿತ ಕಂಪನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ (ಎಂ–ಕ್ಯಾಪ್) ₹422 ಲಕ್ಷ ಕೋಟಿಗೆ ಇಳಿದಿದೆ. </p>.<p>‘ಕಳೆದ ಎರಡು ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡಿದ್ದವು. ಹೀಗಾಗಿ, ಶುಕ್ರವಾರದ ವಹಿವಾಟಿನಲ್ಲಿ ಲಾಭದ ಗಳಿಕೆಗಾಗಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡಲು ಮುಂದಾಗಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿವೆ’ ಎಂದು ಜಿಯೋಜಿತ್ ಇನ್ವೆಸ್ಟ್ಮೆಂಟ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.</p>.<p>ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದಿಂದ ಹೂಡಿಕೆದಾರರು ಎಚ್ಚರಿಕೆ ನಡೆ ಅನುಸರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ರಿಲಯನ್ಸ್ ಇಂಡಸ್ಟ್ರೀಸ್ನ ಷೇರಿನ ಮೌಲ್ಯ ಶೇ 4.6ರಷ್ಟು ಇಳಿದಿದೆ. ಇದರಿಂದ ಕಂಪನಿಯ ಎಂ–ಕ್ಯಾಪ್ ₹87,014 ಕೋಟಿ ಕರಗಿದೆ. ಇಂಟರ್ಗ್ಲೋಬ್ ಏವಿಯೇಷನ್, ಬಜಾಜ್ ಫೈನಾನ್ಸ್, ಭಾರತೀಯ ಸ್ಟೇಟ್ ಬ್ಯಾಂಕ್, ಎಟರ್ನಲ್ ಮತ್ತು ಎಚ್ಡಿಎಫ್ಸಿ ಬ್ಯಾಂಕ್ನ ಷೇರಿನ ಮೌಲ್ಯದಲ್ಲಿ ಇಳಿಕೆ ಆಗಿದೆ.</p>.<p>ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಭಾರ್ತಿ ಏರ್ಟೆಲ್ ಮತ್ತು ಪವರ್ಗ್ರಿಡ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ. </p>.<p>ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 2.93ರಷ್ಟು ಹೆಚ್ಚಳವಾಗಿದೆ. ಪ್ರತಿ ಬ್ಯಾರಲ್ ದರವು 111.2 ಡಾಲರ್ ಆಗಿದೆ. </p>.<p>ಏಷ್ಯಾದ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ ಮತ್ತು ಜಪಾನ್ ಮಾರುಕಟ್ಟೆಯು ಇಳಿಕೆ ಕಂಡಿದ್ದರೆ, ಶಾಂಘೈ ಮತ್ತು ಹಾಂಗ್ಕಾಂಗ್ ಮಾರುಕಟ್ಟೆಯು ಸಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು /ಮುಂಬೈ:</strong> ಪಶ್ಚಿಮ ಏಷ್ಯಾದ ಸಂಘರ್ಷದಿಂದ ಶುಕ್ರವಾರದ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಶೇ 2ಕ್ಕೂ ಹೆಚ್ಚು ಕುಸಿತ ಕಂಡಿದ್ದು, ಕರಡಿ ಕುಣಿತಕ್ಕೆ ಷೇರುಪೇಟೆಯು ತತ್ತರಿಸಿದೆ. </p>.<p>ಕಚ್ಚಾ ತೈಲದ ಬೆಲೆ ಏರಿಕೆ, ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಮತ್ತು ವಿದೇಶಿ ಬಂಡವಾಳದ ನಿರಂತರ ಹೊರಹರಿವು ದೇಶದ ಷೇರುಪೇಟೆ ಸೂಚ್ಯಂಕಗಳ ಇಳಿಕೆಗೆ ಕಾರಣವಾಗಿವೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.</p>.<p>ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,690 ಅಂಶ (ಶೇ 2.25ರಷ್ಟು) ಇಳಿಕೆಯಾಗಿ, 73,583ಕ್ಕೆ ವಹಿವಾಟು ಅಂತ್ಯಗೊಂಡಿದೆ. ದಿನದ ವಹಿವಾಟಿನ ವೇಳೆ ಸೆನ್ಸೆಕ್ಸ್ 1,739 ಅಂಶ ಕುಸಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 486 ಅಂಶ (ಶೇ 2.09ರಷ್ಟು) ಕಡಿಮೆಯಾಗಿ, 22,819ಕ್ಕೆ ಅಂತ್ಯಗೊಂಡಿದೆ. </p>.<p>ಷೇರುಪೇಟೆ ಸೂಚ್ಯಂಕಗಳ ಇಳಿಕೆಯಿಂದ ಹೂಡಿಕೆದಾರರ ಸಂಪತ್ತು ₹8.86 ಲಕ್ಷ ಕೋಟಿ ಕರಗಿದೆ. ಬಿಎಸ್ಇ ನೋಂದಾಯಿತ ಕಂಪನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ (ಎಂ–ಕ್ಯಾಪ್) ₹422 ಲಕ್ಷ ಕೋಟಿಗೆ ಇಳಿದಿದೆ. </p>.<p>‘ಕಳೆದ ಎರಡು ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡಿದ್ದವು. ಹೀಗಾಗಿ, ಶುಕ್ರವಾರದ ವಹಿವಾಟಿನಲ್ಲಿ ಲಾಭದ ಗಳಿಕೆಗಾಗಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡಲು ಮುಂದಾಗಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿವೆ’ ಎಂದು ಜಿಯೋಜಿತ್ ಇನ್ವೆಸ್ಟ್ಮೆಂಟ್ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.</p>.<p>ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದಿಂದ ಹೂಡಿಕೆದಾರರು ಎಚ್ಚರಿಕೆ ನಡೆ ಅನುಸರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ರಿಲಯನ್ಸ್ ಇಂಡಸ್ಟ್ರೀಸ್ನ ಷೇರಿನ ಮೌಲ್ಯ ಶೇ 4.6ರಷ್ಟು ಇಳಿದಿದೆ. ಇದರಿಂದ ಕಂಪನಿಯ ಎಂ–ಕ್ಯಾಪ್ ₹87,014 ಕೋಟಿ ಕರಗಿದೆ. ಇಂಟರ್ಗ್ಲೋಬ್ ಏವಿಯೇಷನ್, ಬಜಾಜ್ ಫೈನಾನ್ಸ್, ಭಾರತೀಯ ಸ್ಟೇಟ್ ಬ್ಯಾಂಕ್, ಎಟರ್ನಲ್ ಮತ್ತು ಎಚ್ಡಿಎಫ್ಸಿ ಬ್ಯಾಂಕ್ನ ಷೇರಿನ ಮೌಲ್ಯದಲ್ಲಿ ಇಳಿಕೆ ಆಗಿದೆ.</p>.<p>ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಭಾರ್ತಿ ಏರ್ಟೆಲ್ ಮತ್ತು ಪವರ್ಗ್ರಿಡ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ. </p>.<p>ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 2.93ರಷ್ಟು ಹೆಚ್ಚಳವಾಗಿದೆ. ಪ್ರತಿ ಬ್ಯಾರಲ್ ದರವು 111.2 ಡಾಲರ್ ಆಗಿದೆ. </p>.<p>ಏಷ್ಯಾದ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ ಮತ್ತು ಜಪಾನ್ ಮಾರುಕಟ್ಟೆಯು ಇಳಿಕೆ ಕಂಡಿದ್ದರೆ, ಶಾಂಘೈ ಮತ್ತು ಹಾಂಗ್ಕಾಂಗ್ ಮಾರುಕಟ್ಟೆಯು ಸಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>