‘ಕೇಂದ್ರೀಯ ಬ್ಯಾಂಕ್ಗಳು ಬಡ್ಡಿ ದರ ಹೆಚ್ಚಿಸಿದರೆ ಜಾಗತಿಕ ಮಟ್ಟದಲ್ಲಿ ಆರ್ಥಿಕ ಬೆಳವಣಿಗೆಯು ಮಂದಗತಿಗೆ ತಿರುಗಬಹುದೇ ಎಂಬ ಆಲೋಚನೆಯಲ್ಲಿ ಹೂಡಿಕೆದಾರರು ಇದ್ದಾರೆ. ಚೀನಾದಲ್ಲಿನ ಲಾಕ್ಡೌನ್ ಹಾಗೂ ರಷ್ಯಾ–ಉಕ್ರೇನ್ ಯುದ್ಧ ಕೂಡ ಮಂದಗತಿಯ ಬೆಳವಣಿಗೆಗೆ ದಾರಿ ಮಾಡಿಕೊಡುವುದೇ ಎಂಬ ಚಿಂತೆಯೂ ಅವರಲ್ಲಿದೆ. ಇದರಿಂದಾಗಿ ಹೂಡಿಕೆದಾರರ ಹಣವು ಷೇರು ಮಾರುಕಟ್ಟೆಗಳಿಂದ ಸುರಕ್ಷಿತ ಹೂಡಿಕೆಗಳ ಕಡೆ ಹರಿದುಹೋಗುತ್ತಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.