‘ದೀಪಾವಳಿಗೆ ಕೊನೆಗೊಂಡ ಒಂದು ವರ್ಷದ ಅವಧಿಯಲ್ಲಿ ದೇಶದ ಷೇರು ಮಾರುಕಟ್ಟೆಗಳು ಅಲ್ಪ ಪ್ರಮಾಣದ ಕುಸಿತ ದಾಖಲಿಸಿದ್ದರೂ, ಭಾರತವು ಇತರ ದೇಶಗಳ ಷೇರುಪೇಟೆಗಳಿಗೆ ಹೋಲಿಸಿದರೆ ವಿಶಿಷ್ಟವಾಗಿ ನಿಲ್ಲುತ್ತದೆ. ಯುರೋಪಿನಲ್ಲಿ ಯುದ್ಧ, ಹಣದುಬ್ಬರ ಹೆಚ್ಚಳ ಮತ್ತು ಬ್ಯಾಂಕ್ ಬಡ್ಡಿ ದರ ಏರಿಕೆಯ ಕಾಲಘಟ್ಟದಲ್ಲಿ ಕೂಡ ಭಾರತದ ಷೇರು ಮಾರುಕಟ್ಟೆಗಳು ಉತ್ತಮ ಸಾಧನೆ ತೋರಿರುವುದು ಪ್ರವರ್ಧಮಾನಕ್ಕೆ ಬರುತ್ತಿರುವ ಭಾರತದ ಶಕ್ತಿಯನ್ನು ತೋರಿಸುತ್ತಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ಹೇಳಿದ್ದಾರೆ.