<p><strong>ಮುಂಬೈ: </strong>ಆರ್ಥಿಕತೆಗೆ ಉತ್ತೇಜನ ನೀಡಲು ಘೋಷಿಸಲಾದ ₹ 20 ಲಕ್ಷ ಕೋಟಿ ಮೊತ್ತದ ಉತ್ತೇಜನಾ ಕೊಡುಗೆಯ ಮೊದಲ ಕಂತು ಷೇರುಪೇಟೆಯ ವಹಿವಾಟಿನಲ್ಲಿ ಉತ್ಸಾಹ ಮೂಡಿಸುವಲ್ಲಿ ವಿಫಲವಾಗಿದೆ.</p>.<p>ಕೊರೊನಾ ವೈರಾಣು ಪಿಡುಗಿನ ಆತಂಕ ಸದ್ಯಕ್ಕೆ ದೂರವಾಗದು ಎನ್ನುವ ವಿಶ್ವ ಆರೋಗ್ಯ ಸಂಘಟನೆಯ ಎಚ್ಚರಿಕೆ ಮತ್ತು ಅಮೆರಿಕದ ಆರ್ಥಿಕ ಪ್ರಗತಿಯ ಅನಿಶ್ಚಿತತೆ ಕುರಿತು ಫೆಡರಲ್ ರಿಸರ್ವ್ ವ್ಯಕ್ತಪಡಿಸಿರುವ ಆತಂಕದ ಕಾರಣಕ್ಕೆ ಜಾಗತಿಕ ಷೇರುಪೇಟೆಗಳಲ್ಲಿಯೂ ವಹಿವಾಟು ಕುಸಿದಿದೆ. ದೇಶಿ ಷೇರುಪೇಟೆಯಲ್ಲಿಯೂ ಇದು ಪ್ರತಿಫಲಿಸಿತು.</p>.<p>ಬೇಡಿಕೆ ಹೆಚ್ಚಿಸುವುದಕ್ಕೆ ಬದಲು ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರದ ಕೊಡುಗೆಯಲ್ಲಿ ಹೆಚ್ಚಿನ ಮಹತ್ವ ದೊರೆತಿದೆ. ₹ 6 ಲಕ್ಷ ಕೋಟಿ ಮೊತ್ತದ ಕೊಡುಗೆಗಳು ಅಲ್ಪಾವಧಿಯಲ್ಲಿ ಆರ್ಥಿಕತೆಗೆ ಯಾವುದೇ ಉತ್ತೇಜನ ನೀಡುವ ಸಾಧ್ಯತೆ ಇಲ್ಲ ಎಂದು ಮಾರುಕಟ್ಟೆ ಪರಿಣತರು ವಿಶ್ಲೇಷಿಸಿದ್ದಾರೆ.</p>.<p>ವಿತ್ತೀಯ ಉತ್ತೇಜನಾ ಕೊಡುಗೆಗಳಲ್ಲಿ ತಕ್ಷಣಕ್ಕೆ ವೆಚ್ಚ ಮಾಡಬಹುದಾದ ಮೊತ್ತವು ಕಡಿಮೆ ಇರುವುದರಿಂದ ಪೇಟೆಯ ವಹಿವಾಟುದಾರರಲ್ಲಿ ನಿರಾಶೆ ಮನೆ ಮಾಡಿದೆ. ಭಾರಿ ಮೊತ್ತದ ಕೊಡುಗೆಗಳಿಗೆ ಪ್ರತಿಯಾಗಿ ಆರ್ಥಿಕ ಪ್ರಗತಿಯಲ್ಲಿ ತಕ್ಷಣಕ್ಕೆ ಚೇತರಿಕೆ ಕಂಡುಬರುವ ಬಗ್ಗೆ ಪೇಟೆಯಲ್ಲಿ ಅನುಮಾನ ಮನೆ ಮಾಡಿದೆ.</p>.<p>ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಪ್ರಕಟಿಸಿರುವ ಕೊಡುಗೆಗಳಲ್ಲಿ ಹೆಚ್ಚಿನವು ಸಾಲ ಖಾತರಿಗೆ ಸಂಬಂಧಿಸಿವೆ. ಆರ್ಥಿಕ ಉತ್ತೇಜನಾ ಕೊಡುಗೆಗಳಿಗೆ ಹಣ ಹೊಂದಿಸುವ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲದಿರುವುದರಿಂದಲೂ ಪೇಟೆಯಲ್ಲಿ ಖರೀದಿ ಉತ್ಸಾಹ ಕಂಡು ಬಂದಿಲ್ಲ. ₹ 6 ಲಕ್ಷ ಕೋಟಿ ಮೊತ್ತದ ಕೊಡುಗೆ ಘೋಷಿಸಿದ್ದರೂ ವಾಸ್ತವದಲ್ಲಿ ಸರ್ಕಾರದ ವೆಚ್ಚ ಗರಿಷ್ಠ ₹ 1.9 ಲಕ್ಷ ಕೋಟಿಗೆ ಸೀಮಿತಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.</p>.<p>ರಿಲಯನ್ಸ್ ಇಂಡಸ್ಟ್ರೀಸ್, ಎಚ್ಡಿಎಫ್ಸಿ, ಇನ್ಫೊಸಿಸ್, ಐಸಿಐಸಿಐ ಬ್ಯಾಂಕ್ ಷೇರುಗಳಲ್ಲಿನ ಮಾರಾಟ ಒತ್ತಡದಿಂದಾಗಿ ಸಂವೇದಿ ಸೂಚ್ಯಂಕವು 886 ಅಂಶ ಕುಸಿತ ಕಂಡು 31,122 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ರಾಷ್ಟ್ರೀಯ ಷೇರುಪೇಟೆ ‘ನಿಫ್ಟಿ’ ಕೂಡ 240 ಅಂಶ ಕುಸಿದು 9,142 ರಲ್ಲಿ ವಹಿವಾಟು ಕೊನೆಗೊಳಿಸಿತು.</p>.<p><strong>ಕರಗಿದ ₹ 1.99 ಲಕ್ಷ ಕೋಟಿ ಸಂಪತ್ತು</strong></p>.<p>ಷೇರುಗಳ ಮಾರಾಟ ಒತ್ತಡದಿಂದಾಗಿ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ₹ 1.99 ಲಕ್ಷ ಕೋಟಿ ಸಂಪತ್ತು ಕರಗಿದೆ. ಮಾರುಕಟ್ಟೆಯಲ್ಲಿ ವಹಿವಾಟು ನಡೆಸುವ ಕಂಪನಿಗಳ ಮಾರುಕಟ್ಟೆ ಮೌಲ್ಯವು ಈಗ ₹ 122 ಲಕ್ಷ ಕೋಟಿಗೆ ಇಳಿದಿದೆ.</p>.<p>- ತಕ್ಷಣಕ್ಕೆ ವೆಚ್ಚ ಮಾಡುವ ಮೊತ್ತ ಕಡಿಮೆ</p>.<p>- ಅಲ್ಪಾವಧಿಯಲ್ಲಿ ಆರ್ಥಿಕತೆ ಚೇತರಿಕೆ ಕಾಣುವ ಸಾಧ್ಯತೆ ಕ್ಷೀಣ- ಪೂರಕ ಪ್ರಕಟಣೆಗಳನ್ನು ಎದುರು ನೋಡುತ್ತಿರುವ ವಹಿವಾಟುದಾರರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಆರ್ಥಿಕತೆಗೆ ಉತ್ತೇಜನ ನೀಡಲು ಘೋಷಿಸಲಾದ ₹ 20 ಲಕ್ಷ ಕೋಟಿ ಮೊತ್ತದ ಉತ್ತೇಜನಾ ಕೊಡುಗೆಯ ಮೊದಲ ಕಂತು ಷೇರುಪೇಟೆಯ ವಹಿವಾಟಿನಲ್ಲಿ ಉತ್ಸಾಹ ಮೂಡಿಸುವಲ್ಲಿ ವಿಫಲವಾಗಿದೆ.</p>.<p>ಕೊರೊನಾ ವೈರಾಣು ಪಿಡುಗಿನ ಆತಂಕ ಸದ್ಯಕ್ಕೆ ದೂರವಾಗದು ಎನ್ನುವ ವಿಶ್ವ ಆರೋಗ್ಯ ಸಂಘಟನೆಯ ಎಚ್ಚರಿಕೆ ಮತ್ತು ಅಮೆರಿಕದ ಆರ್ಥಿಕ ಪ್ರಗತಿಯ ಅನಿಶ್ಚಿತತೆ ಕುರಿತು ಫೆಡರಲ್ ರಿಸರ್ವ್ ವ್ಯಕ್ತಪಡಿಸಿರುವ ಆತಂಕದ ಕಾರಣಕ್ಕೆ ಜಾಗತಿಕ ಷೇರುಪೇಟೆಗಳಲ್ಲಿಯೂ ವಹಿವಾಟು ಕುಸಿದಿದೆ. ದೇಶಿ ಷೇರುಪೇಟೆಯಲ್ಲಿಯೂ ಇದು ಪ್ರತಿಫಲಿಸಿತು.</p>.<p>ಬೇಡಿಕೆ ಹೆಚ್ಚಿಸುವುದಕ್ಕೆ ಬದಲು ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರದ ಕೊಡುಗೆಯಲ್ಲಿ ಹೆಚ್ಚಿನ ಮಹತ್ವ ದೊರೆತಿದೆ. ₹ 6 ಲಕ್ಷ ಕೋಟಿ ಮೊತ್ತದ ಕೊಡುಗೆಗಳು ಅಲ್ಪಾವಧಿಯಲ್ಲಿ ಆರ್ಥಿಕತೆಗೆ ಯಾವುದೇ ಉತ್ತೇಜನ ನೀಡುವ ಸಾಧ್ಯತೆ ಇಲ್ಲ ಎಂದು ಮಾರುಕಟ್ಟೆ ಪರಿಣತರು ವಿಶ್ಲೇಷಿಸಿದ್ದಾರೆ.</p>.<p>ವಿತ್ತೀಯ ಉತ್ತೇಜನಾ ಕೊಡುಗೆಗಳಲ್ಲಿ ತಕ್ಷಣಕ್ಕೆ ವೆಚ್ಚ ಮಾಡಬಹುದಾದ ಮೊತ್ತವು ಕಡಿಮೆ ಇರುವುದರಿಂದ ಪೇಟೆಯ ವಹಿವಾಟುದಾರರಲ್ಲಿ ನಿರಾಶೆ ಮನೆ ಮಾಡಿದೆ. ಭಾರಿ ಮೊತ್ತದ ಕೊಡುಗೆಗಳಿಗೆ ಪ್ರತಿಯಾಗಿ ಆರ್ಥಿಕ ಪ್ರಗತಿಯಲ್ಲಿ ತಕ್ಷಣಕ್ಕೆ ಚೇತರಿಕೆ ಕಂಡುಬರುವ ಬಗ್ಗೆ ಪೇಟೆಯಲ್ಲಿ ಅನುಮಾನ ಮನೆ ಮಾಡಿದೆ.</p>.<p>ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಪ್ರಕಟಿಸಿರುವ ಕೊಡುಗೆಗಳಲ್ಲಿ ಹೆಚ್ಚಿನವು ಸಾಲ ಖಾತರಿಗೆ ಸಂಬಂಧಿಸಿವೆ. ಆರ್ಥಿಕ ಉತ್ತೇಜನಾ ಕೊಡುಗೆಗಳಿಗೆ ಹಣ ಹೊಂದಿಸುವ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲದಿರುವುದರಿಂದಲೂ ಪೇಟೆಯಲ್ಲಿ ಖರೀದಿ ಉತ್ಸಾಹ ಕಂಡು ಬಂದಿಲ್ಲ. ₹ 6 ಲಕ್ಷ ಕೋಟಿ ಮೊತ್ತದ ಕೊಡುಗೆ ಘೋಷಿಸಿದ್ದರೂ ವಾಸ್ತವದಲ್ಲಿ ಸರ್ಕಾರದ ವೆಚ್ಚ ಗರಿಷ್ಠ ₹ 1.9 ಲಕ್ಷ ಕೋಟಿಗೆ ಸೀಮಿತಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.</p>.<p>ರಿಲಯನ್ಸ್ ಇಂಡಸ್ಟ್ರೀಸ್, ಎಚ್ಡಿಎಫ್ಸಿ, ಇನ್ಫೊಸಿಸ್, ಐಸಿಐಸಿಐ ಬ್ಯಾಂಕ್ ಷೇರುಗಳಲ್ಲಿನ ಮಾರಾಟ ಒತ್ತಡದಿಂದಾಗಿ ಸಂವೇದಿ ಸೂಚ್ಯಂಕವು 886 ಅಂಶ ಕುಸಿತ ಕಂಡು 31,122 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ರಾಷ್ಟ್ರೀಯ ಷೇರುಪೇಟೆ ‘ನಿಫ್ಟಿ’ ಕೂಡ 240 ಅಂಶ ಕುಸಿದು 9,142 ರಲ್ಲಿ ವಹಿವಾಟು ಕೊನೆಗೊಳಿಸಿತು.</p>.<p><strong>ಕರಗಿದ ₹ 1.99 ಲಕ್ಷ ಕೋಟಿ ಸಂಪತ್ತು</strong></p>.<p>ಷೇರುಗಳ ಮಾರಾಟ ಒತ್ತಡದಿಂದಾಗಿ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ₹ 1.99 ಲಕ್ಷ ಕೋಟಿ ಸಂಪತ್ತು ಕರಗಿದೆ. ಮಾರುಕಟ್ಟೆಯಲ್ಲಿ ವಹಿವಾಟು ನಡೆಸುವ ಕಂಪನಿಗಳ ಮಾರುಕಟ್ಟೆ ಮೌಲ್ಯವು ಈಗ ₹ 122 ಲಕ್ಷ ಕೋಟಿಗೆ ಇಳಿದಿದೆ.</p>.<p>- ತಕ್ಷಣಕ್ಕೆ ವೆಚ್ಚ ಮಾಡುವ ಮೊತ್ತ ಕಡಿಮೆ</p>.<p>- ಅಲ್ಪಾವಧಿಯಲ್ಲಿ ಆರ್ಥಿಕತೆ ಚೇತರಿಕೆ ಕಾಣುವ ಸಾಧ್ಯತೆ ಕ್ಷೀಣ- ಪೂರಕ ಪ್ರಕಟಣೆಗಳನ್ನು ಎದುರು ನೋಡುತ್ತಿರುವ ವಹಿವಾಟುದಾರರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>