ಈಗಾಗಲೇ ಮದುವೆಯಾಗಿ ಎರಡು ಮಕ್ಕಳನ್ನು ಹೊಂದಿರುವ ಅಮರೇಗೌಡ ಮುದೇನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಹನಾಜ್ಬಿ ಅವರನ್ನು ಮದುವೆಯಾಗುವಂತೆ ಪೀಡಿಸಿದ್ದ. ಆದರೆ, ಆತನ ಪ್ರಸ್ತಾವ ನಿರಾಕರಿಸಿದ್ದರಿಂದ, 2017ರ ಮಾರ್ಚ್ 25ರಂದು ತನ್ನ ಬೈಕ್ನಲ್ಲಿ ಮಹಿಳೆ ಮತ್ತು ಅವರ ತಾಯಿಯನ್ನು ಹೊಲವೊಂದಕ್ಕೆ ಕರೆದೊಯ್ದು, ಮಹಿಳೆಯ ಕತ್ತು ಕುಯ್ದು ಕೊಲೆ ಮಾಡಿದ್ದ. ನಂತರ ಶವವನ್ನು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸುಟ್ಟಿದ್ದ.