<p><strong>ಮುಂಬೈ: </strong>ದೇಶದ ಷೇರುಪೇಟೆಗಳಲ್ಲಿ ಸತತ ನಾಲ್ಕನೇ ದಿನವೂ ಸಕಾರಾತ್ಮಕ ವಹಿವಾಟು ಮುಂದುವರಿಯಿತು.</p>.<p>ಗುರುವಾರ ಆರ್ಬಿಐ ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಆರ್ಥಿಕತೆಗೆ ಉತ್ತೇಜನ ನೀಡಲು ಬಡ್ಡಿದರ ಕಡಿತ ಮಾಡಲು ಅವಕಾಶ ಮುಕ್ತವಾಗಿದೆ ಎಂದೂ ಹೇಳಿದೆ. ಇದು ಸಕಾರಾತ್ಮಕ ವಹಿವಾಟಿಗೆ ಕಾರಣವಾಯಿತು.</p>.<p>ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 164 ಅಂಶ ಹೆಚ್ಚಾಗಿ 41,306 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.</p>.<p>ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 48 ಅಂಶ ಹೆಚ್ಚಾಗಿ 12,137 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.</p>.<p class="Subhead">ಗಳಿಕೆ: ದರ ಸೂಕ್ಷ್ಮವಾದ ಹಣಕಾಸು, ಬ್ಯಾಂಕಿಂಗ್ ಮತ್ತು ವಾಹನ ವಲಯದ ಷೇರುಗಳು ಗಳಿಕೆ ಕಂಡುಕೊಂಡಿವೆ. ಬಿಎಸ್ಇ ಫೈನಾನ್ಸ್ ಶೇ 1.21ರವರೆಗೆ ಏರಿಕೆ ಕಂಡಿದೆ.</p>.<p>ಇಂಡಸ್ಇಂಡ್ ಬ್ಯಾಂಕ್ ಷೇರು ಶೇ 4.85ರಷ್ಟು ಏರಿಕೆಯಾಗಿದೆ. ಎಸ್ಬಿಐ, ಬಜಾಜ್ ಫೈನಾನ್ಸ್, ಭಾರ್ತಿ ಏರ್ಟೆಲ್, ಎಚ್ಡಿಎಫ್ಸಿ, ಆ್ಯಕ್ಸಿಸ್ ಬ್ಯಾಂಕ್ ಮತ್ತು ಹೀರೊ ಮೋಟೊಕಾರ್ಪ್ ಷೇರುಗಳ ಮೌಲ್ಯದಲ್ಲಿಯೂ ಏರಿಕೆಯಾಗಿದೆ.</p>.<p class="Subhead">ಇಳಿಕೆ: ಇನ್ಫೊಸಿಸ್, ಟೈಟಾನ್, ಐಟಿಸಿ, ಕೋಟಕ್ ಬ್ಯಾಂಕ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಶೇ 1.73ರವರೆಗೂ ಇಳಿಕೆಯಾಗಿವೆ.</p>.<p>‘ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದು ನಿರೀಕ್ಷಿತ ನಿರ್ಧಾರವೇ ಆಗಿದೆ. ಆದರೆ, ನಗದು ಲಭ್ಯತೆ ಹೆಚ್ಚಿಸುವ ಆರ್ಬಿಐನ ಕ್ರಮ ಅಚ್ಚರಿ ಮೂಡಿಸಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ದೇಶದ ಷೇರುಪೇಟೆಗಳಲ್ಲಿ ಸತತ ನಾಲ್ಕನೇ ದಿನವೂ ಸಕಾರಾತ್ಮಕ ವಹಿವಾಟು ಮುಂದುವರಿಯಿತು.</p>.<p>ಗುರುವಾರ ಆರ್ಬಿಐ ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಆರ್ಥಿಕತೆಗೆ ಉತ್ತೇಜನ ನೀಡಲು ಬಡ್ಡಿದರ ಕಡಿತ ಮಾಡಲು ಅವಕಾಶ ಮುಕ್ತವಾಗಿದೆ ಎಂದೂ ಹೇಳಿದೆ. ಇದು ಸಕಾರಾತ್ಮಕ ವಹಿವಾಟಿಗೆ ಕಾರಣವಾಯಿತು.</p>.<p>ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 164 ಅಂಶ ಹೆಚ್ಚಾಗಿ 41,306 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.</p>.<p>ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 48 ಅಂಶ ಹೆಚ್ಚಾಗಿ 12,137 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.</p>.<p class="Subhead">ಗಳಿಕೆ: ದರ ಸೂಕ್ಷ್ಮವಾದ ಹಣಕಾಸು, ಬ್ಯಾಂಕಿಂಗ್ ಮತ್ತು ವಾಹನ ವಲಯದ ಷೇರುಗಳು ಗಳಿಕೆ ಕಂಡುಕೊಂಡಿವೆ. ಬಿಎಸ್ಇ ಫೈನಾನ್ಸ್ ಶೇ 1.21ರವರೆಗೆ ಏರಿಕೆ ಕಂಡಿದೆ.</p>.<p>ಇಂಡಸ್ಇಂಡ್ ಬ್ಯಾಂಕ್ ಷೇರು ಶೇ 4.85ರಷ್ಟು ಏರಿಕೆಯಾಗಿದೆ. ಎಸ್ಬಿಐ, ಬಜಾಜ್ ಫೈನಾನ್ಸ್, ಭಾರ್ತಿ ಏರ್ಟೆಲ್, ಎಚ್ಡಿಎಫ್ಸಿ, ಆ್ಯಕ್ಸಿಸ್ ಬ್ಯಾಂಕ್ ಮತ್ತು ಹೀರೊ ಮೋಟೊಕಾರ್ಪ್ ಷೇರುಗಳ ಮೌಲ್ಯದಲ್ಲಿಯೂ ಏರಿಕೆಯಾಗಿದೆ.</p>.<p class="Subhead">ಇಳಿಕೆ: ಇನ್ಫೊಸಿಸ್, ಟೈಟಾನ್, ಐಟಿಸಿ, ಕೋಟಕ್ ಬ್ಯಾಂಕ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಶೇ 1.73ರವರೆಗೂ ಇಳಿಕೆಯಾಗಿವೆ.</p>.<p>‘ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದು ನಿರೀಕ್ಷಿತ ನಿರ್ಧಾರವೇ ಆಗಿದೆ. ಆದರೆ, ನಗದು ಲಭ್ಯತೆ ಹೆಚ್ಚಿಸುವ ಆರ್ಬಿಐನ ಕ್ರಮ ಅಚ್ಚರಿ ಮೂಡಿಸಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>