ನವದೆಹಲಿ:ಶಕ್ತಿಕಾಂತದಾಸ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ)ನ ನೂತನ ಗವರ್ನರ್ ಆಗಿ ಮಂಗಳವಾರ ನೇಮಕ ಮಾಡಲಾಗಿದೆ.
ಊರ್ಜಿತ್ ಪಟೇಲ್ ಆರ್ಬಿಐ ಗವರ್ನರ್ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದರು.
2015–2017ರವರೆಗೂ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಶಕ್ತಿಕಾಂತದಾಸ್ ಆರ್ಬಿಐನ 25ನೇ ಗವರ್ನರ್ ಆಗಿ ಅಧಿಕಾರ ವಹಿಸಲಿದ್ದಾರೆ. ಪ್ರಸ್ತುತ ದೇಶದ ಹಣಕಾಸು ಆಯೋಗದ ಸದಸ್ಯರಾಗಿರುವ ದಾಸ್, ಕಂದಾಯ ಇಲಾಖೆಯಿಂದ ವಿತ್ತ ಸಚಿವಾಲಯದ ಆರ್ಥಿಕ ವ್ಯವಹಾರಗಳ ಜವಾಬ್ದಾರಿ ವಹಿಸಿದರು.2016ರ ನೋಟು ರದ್ಧತಿಯ ನಂತರದ ಪ್ರಮುಖ ಬೆಳವಣಿಗೆಗಳಲ್ಲಿ ದಾಸ್ ಸುದ್ದಿಯಲ್ಲಿದ್ದರು.
ತಮಿಳುನಾಡು ಕೇಡರ್ ನಿವೃತ್ತ ಐಎಎಸ್ ಅಧಿಕಾರಿ ಶಕ್ತಿಕಾಂತದಾಸ್(63) ತಮಿಳುನಾಡು ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ಉನ್ನತ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.