ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೈಗಾರಿಕೆಗಳಿಗೆ ಅಗತ್ಯ ಪ್ರಮಾಣದಲ್ಲಿ ಜಮೀನು ಲಭ್ಯವಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಹೇಳಿದರು.
ಇಂದೋರ್ನಲ್ಲಿ ಜನವರಿಯಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಉದ್ಯಮಿಗಳ ಜೊತೆ ಚರ್ಚಿಸಲು ಅವರು ಬೆಂಗಳೂರಿಗೆ ಬಂದಿದ್ದರು. ಉದ್ಯಮಿಗಳಿಗೆ ಅಗತ್ಯವಿರುವ ಪ್ರಮಾಣದಲ್ಲಿ ನೀರು ಹಾಗೂ ವಿದ್ಯುತ್ ಕೂಡ ರಾಜ್ಯದಲ್ಲಿ ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು.
‘ಕೈಗಾರಿಕೆಗಳ ಅಗತ್ಯಕ್ಕೆ ಅನುಗುಣವಾಗಿ ನೀತಿಗಳಲ್ಲಿ ಸೂಕ್ತ ಬದಲಾವಣೆ ತರಲು ಸರ್ಕಾರ ಒಪ್ಪುತ್ತದೆ’ ಎಂದು ಅವರು ಭರವಸೆ ನೀಡಿದರು. ಉದ್ಯಮಿಗಳು, ಹೂಡಿಕೆದಾರರು ಸಮಾವೇಶಕ್ಕೆ ಬರಬೇಕು ಎಂದು ಆಹ್ವಾನಿಸಿದರು.