ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಶಿವರಾಜ್ ಸಿಂಗ್

Last Updated 23 ನವೆಂಬರ್ 2022, 12:31 IST
ಅಕ್ಷರ ಗಾತ್ರ

ಬೆಂಗಳೂರು: ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನವರಿ 11 ಮತ್ತು 12ರಂದು ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಅದಕ್ಕೆ ಸಂಬಂಧಿಸಿದಂತೆ ಹೂಡಿಕೆದಾರರ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಬೆಂಗಳೂರಿಗೆ ಬರಲಿದ್ದಾರೆ.

ಹೂಡಿಕೆದಾರರ ಸಮಾವೇಶದ ಮೂಲಕ ಮಧ್ಯಪ್ರದೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಚೌಹಾಣ್ ಅವರು ಹೇಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಚೌಹಾಣ್ ಅವರು ಬೆಂಗಳೂರಿನಲ್ಲಿ ಐ.ಟಿ, ಬಿಪಿಒ, ಎಲೆಕ್ಟ್ರಾನಿಕ್ಸ್ ವ್ಯವಸ್ಥೆಯ ವಿನ್ಯಾಸ ಮತ್ತು ತಯಾರಿಕೆ (ಇಎಸ್‌ಡಿಎಂ) ವಲಯದ ಕಂಪನಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ಜವಳಿ ಹಾಗೂ ಗಾರ್ಮೆಂಟ್ ಕಂಪನಿಗಳ ಪ್ರತಿನಿಧಿಗಳ ಜೊತೆಯಲ್ಲಿಯೂ ಅವರು ಮಾತುಕತೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT