<p>ಚನ್ನಗಿರಿ: ‘2006ರಲ್ಲಿ ವಿಜಯಪುರದಲ್ಲಿ ಪ್ರಾರಂಭಗೊಂಡ ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ-ಪರ್ಪಸ್ ಕೋ ಆಪರೇಟಿವ್ ಸೊಸೈಟಿ 20 ವರ್ಷಗಳಲ್ಲಿ ದೇಶದ 10 ಅತ್ಯುನ್ನತ ಸಹಕಾರ ಸಂಘಗಳಲ್ಲಿ ಒಂದಾಗಿ ಬೆಳೆದು ನಿಂತಿದೆ. ಇದಕ್ಕೆ ಜನರ ವಿಶ್ವಾಸ ಹಾಗೂ ರೈತರ ಸಹಕಾರ ಕಾರಣ’ ಎಂದು ಸೊಸೈಟಿ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.</p>.<p>ಪಟ್ಟಣದ ಚನ್ನಮ್ಮಾಜಿ ಸಮುದಾಯ ಭವನದಲ್ಲಿ ಈಚೆಗೆ ನಡೆದ ಚನ್ನಗಿರಿ ಶಾಖೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಚನ್ನಗಿರಿ ಪಟ್ಟಣದಲ್ಲಿ 213ನೇ ಶಾಖೆ ಪ್ರಾರಂಭಗೊಳ್ಳುತ್ತಿದೆ. ಎಲ್ಲ ಶಾಖೆಗಳಿಂದ ಒಟ್ಟು 83,843 ಸದಸ್ಯರನ್ನು ಹೊಂದಿದ್ದು, ₹5,328 ಕೋಟಿ ಠೇವಣಿ ಸಂಗ್ರಹ ಮಾಡಲಾಗಿದೆ. ₹3,534 ಕೋಟಿಗಿಂತಲೂ ಹೆಚ್ಚು ಸಾಲ ನೀಡಲಾಗಿದೆ. ಸಿದ್ಧಸಿರಿ ಇಂಧನ ಕೇಂದ್ರ, ರೈತರ ಗೋದಾಮು, ಭಾರತೀಯ ಜನೌಷಧಿ ಕೇಂದ್ರ, ಚಿಟ್ ಫಂಡ್, ಸಿದ್ಧಸಿರಿ ಕೋಲ್ಡ್ ಸ್ಟೋರೇಜ್, ದ್ರಾಕ್ಷಿ ಸಂಸ್ಕರಣಾ ಘಟಕ, ಸಿದ್ಧಸಿರಿ ಕೃಷಿ ಕೇಂದ್ರ, ದ್ರಾಕ್ಷಿ ಬೆಳೆಗಾರರಿಗೆ ಶೇ 15 ಬಡ್ಡಿ ದರದಲ್ಲಿ ಸಾಲ, ಮಹಿಳಾ ಶಾಖೆ, ಕೇಸರಿ ಸ್ವಾವಲಂಬಿ ಯೋಜನೆ, ಪ್ರಧಾನಮಂತ್ರಿ ಆವಾಸ ಯೋಜನೆ ಅಡಿ ಮನೆ ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಾಲ, ಜ್ಞಾನಯೋಗಿ ಸಿದ್ಧೇಶ್ವರ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ, ಗೋಶಾಲೆ ಹಾಗೂ ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ 423 ಕೆಎಲ್ಪಿಡಿ ಸಾಮರ್ಥ್ಯದ ಎಥೆನಾಲ್ ಘಟಕ, 30 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕವನ್ನು ನಮ್ಮ ಸಂಸ್ಥೆಯಿಂದ ಪ್ರಾರಂಭಿಸಲಾಗಿದೆ’ ಎಂದರು.</p>.<p>‘ರೈತರ ಹಿತದೃಷ್ಟಿಯಿಂದ ಚನ್ನಗಿರಿ ಪಟ್ಟಣದಲ್ಲಿ ಸಹಕಾರ ಸಂಘ ಪ್ರಾರಂಭಿ ಸುತ್ತಿರುವುದು ಸ್ವಾಗತಾರ್ಹ’ ಎಂದು ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಆಶಿಸಿದರು.</p>.<p>ತುಮ್ಕೋಸ್ ಅಧ್ಯಕ್ಷ ಎಚ್.ಎಸ್. ಶಿವಕುಮಾರ್, ಗೋ ಸೇವಾ ಜಿಲ್ಲಾ ಸಂಯೋಜಕ ಶಿವಲಿಂಗಪ್ಪ, ಕೃಷಿಕ ಓಂಕಾರಪ್ಪ, ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ. ಮಂಜುನಾಥ್, ಉದ್ಯಮಿಗಳಾದ ನವೀನ್, ತಿಮ್ಮೇಶ್ ಉಪಸ್ಥಿತರಿದ್ದರು.</p>.<p>ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಿರೇಮಠದ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.</p>.<p>ಸಿದ್ಧಸಿರಿ ಸಂಸ್ಥೆಯ ಅಧ್ಯಕ್ಷ ರಾಮನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-43-1253890213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ‘2006ರಲ್ಲಿ ವಿಜಯಪುರದಲ್ಲಿ ಪ್ರಾರಂಭಗೊಂಡ ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ-ಪರ್ಪಸ್ ಕೋ ಆಪರೇಟಿವ್ ಸೊಸೈಟಿ 20 ವರ್ಷಗಳಲ್ಲಿ ದೇಶದ 10 ಅತ್ಯುನ್ನತ ಸಹಕಾರ ಸಂಘಗಳಲ್ಲಿ ಒಂದಾಗಿ ಬೆಳೆದು ನಿಂತಿದೆ. ಇದಕ್ಕೆ ಜನರ ವಿಶ್ವಾಸ ಹಾಗೂ ರೈತರ ಸಹಕಾರ ಕಾರಣ’ ಎಂದು ಸೊಸೈಟಿ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.</p>.<p>ಪಟ್ಟಣದ ಚನ್ನಮ್ಮಾಜಿ ಸಮುದಾಯ ಭವನದಲ್ಲಿ ಈಚೆಗೆ ನಡೆದ ಚನ್ನಗಿರಿ ಶಾಖೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಚನ್ನಗಿರಿ ಪಟ್ಟಣದಲ್ಲಿ 213ನೇ ಶಾಖೆ ಪ್ರಾರಂಭಗೊಳ್ಳುತ್ತಿದೆ. ಎಲ್ಲ ಶಾಖೆಗಳಿಂದ ಒಟ್ಟು 83,843 ಸದಸ್ಯರನ್ನು ಹೊಂದಿದ್ದು, ₹5,328 ಕೋಟಿ ಠೇವಣಿ ಸಂಗ್ರಹ ಮಾಡಲಾಗಿದೆ. ₹3,534 ಕೋಟಿಗಿಂತಲೂ ಹೆಚ್ಚು ಸಾಲ ನೀಡಲಾಗಿದೆ. ಸಿದ್ಧಸಿರಿ ಇಂಧನ ಕೇಂದ್ರ, ರೈತರ ಗೋದಾಮು, ಭಾರತೀಯ ಜನೌಷಧಿ ಕೇಂದ್ರ, ಚಿಟ್ ಫಂಡ್, ಸಿದ್ಧಸಿರಿ ಕೋಲ್ಡ್ ಸ್ಟೋರೇಜ್, ದ್ರಾಕ್ಷಿ ಸಂಸ್ಕರಣಾ ಘಟಕ, ಸಿದ್ಧಸಿರಿ ಕೃಷಿ ಕೇಂದ್ರ, ದ್ರಾಕ್ಷಿ ಬೆಳೆಗಾರರಿಗೆ ಶೇ 15 ಬಡ್ಡಿ ದರದಲ್ಲಿ ಸಾಲ, ಮಹಿಳಾ ಶಾಖೆ, ಕೇಸರಿ ಸ್ವಾವಲಂಬಿ ಯೋಜನೆ, ಪ್ರಧಾನಮಂತ್ರಿ ಆವಾಸ ಯೋಜನೆ ಅಡಿ ಮನೆ ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಾಲ, ಜ್ಞಾನಯೋಗಿ ಸಿದ್ಧೇಶ್ವರ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ, ಗೋಶಾಲೆ ಹಾಗೂ ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ 423 ಕೆಎಲ್ಪಿಡಿ ಸಾಮರ್ಥ್ಯದ ಎಥೆನಾಲ್ ಘಟಕ, 30 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕವನ್ನು ನಮ್ಮ ಸಂಸ್ಥೆಯಿಂದ ಪ್ರಾರಂಭಿಸಲಾಗಿದೆ’ ಎಂದರು.</p>.<p>‘ರೈತರ ಹಿತದೃಷ್ಟಿಯಿಂದ ಚನ್ನಗಿರಿ ಪಟ್ಟಣದಲ್ಲಿ ಸಹಕಾರ ಸಂಘ ಪ್ರಾರಂಭಿ ಸುತ್ತಿರುವುದು ಸ್ವಾಗತಾರ್ಹ’ ಎಂದು ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಆಶಿಸಿದರು.</p>.<p>ತುಮ್ಕೋಸ್ ಅಧ್ಯಕ್ಷ ಎಚ್.ಎಸ್. ಶಿವಕುಮಾರ್, ಗೋ ಸೇವಾ ಜಿಲ್ಲಾ ಸಂಯೋಜಕ ಶಿವಲಿಂಗಪ್ಪ, ಕೃಷಿಕ ಓಂಕಾರಪ್ಪ, ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ. ಮಂಜುನಾಥ್, ಉದ್ಯಮಿಗಳಾದ ನವೀನ್, ತಿಮ್ಮೇಶ್ ಉಪಸ್ಥಿತರಿದ್ದರು.</p>.<p>ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಿರೇಮಠದ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.</p>.<p>ಸಿದ್ಧಸಿರಿ ಸಂಸ್ಥೆಯ ಅಧ್ಯಕ್ಷ ರಾಮನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-43-1253890213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>