<p><strong>ಬೆಂಗಳೂರು</strong>: ಕೋವಿಡ್ ಬಿಕ್ಕಟ್ಟಿನಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೇಷ್ಮೆ ಉದ್ದಿಮೆಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಕೆ. ಸಿ. ನಾರಾಯಣಗೌಡ ಅವರು ಭರವಸೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ಕರೆದು ಉದ್ದಿಮೆಯ ಭಾಗಿದಾರರೆಲ್ಲರ ತೊಂದರೆ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<p>ತಮ್ಮನ್ನು ಭೇಟಿಯಾಗಿ ಅಹವಾಲು ಸಲ್ಲಿಸಿದ ಸಿಲ್ಕ್ ಅಸೋಸಿಯೇಷನ್ ಆಫ್ ಇಂಡಿಯಾದ ನಿಯೋಗಕ್ಕೆ ಸಚಿವರು ಈ ವಾಗ್ದಾನ ನೀಡಿದ್ದಾರೆ.</p>.<p>ಉತ್ಪಾದನೆಯಾದ ರೇಷ್ಮೆ ಮಾರಾಟಗೊಳ್ಳದೆ ಇಡೀ ಉದ್ದಿಮೆ ಬಿಕ್ಕಟ್ಟು ಎದುರಿಸುತ್ತಿದೆ. ಉದ್ದಿಮೆ ನೆಚ್ಚಿಕೊಂಡಿರುವ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದಿವೆ. ಹೂ ಬೆಳೆಗಾರರಿಗೆ ಘೋಷಿಸಿದ ನೆರವಿನ ಮಾದರಿಯಲ್ಲಿ ರೇಷ್ಮೆ ಬೆಳೆಗಾರರಿಗೂ ಹಣಕಾಸಿನ ಕೊಡುಗೆ ನೀಡಬೇಕು. ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಗೆ ₹ 250 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ರೇಷ್ಮೆ ಮೊಟ್ಟೆ ಉತ್ಪಾದಕರಿಗೆ ಕನಿಷ್ಠ ಬಡ್ಡಿಯ ಸಾಲದ ಸೌಲಭ್ಯ ಕಲ್ಪಿಸಬೇಕು. ಚಾಕಿ ಸಾಕಾಣಿಕೆದಾರರಿಗೆ ಹಣಕಾಸಿನ ನೆರವು ನೀಡಲು ₹ 20 ಕೋಟಿ ಅನುದಾನ ನೀಡಬೇಕು. ರೇಷ್ಮೆ ನೇಕಾರರಿಗೆ ಬ್ಯಾಂಕ್ ಸಾಲ ಕಲ್ಪಿಸಲು ನೆರವಾಗಬೇಕು ಎಂದು ನಿಯೋಗವು ಸಚಿವರಿಗೆ ಮನವಿ ಮಾಡಿಕೊಂಡಿದೆ.</p>.<p>ಅಸೋಸಿಯೇಷನ್ನಿನ ಗೌರವ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಅಧ್ಯಕ್ಷ ವಿ. ಬಾಲಸುಬ್ರಮಣಿಯನ್ ಮತ್ತು ಕಾರ್ಯದರ್ಶಿ ಎಂ. ರಾಮಚಂದ್ರಗೌಡ ಅವರು ನಿಯೋಗದ ನೇತೃತ್ವವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಬಿಕ್ಕಟ್ಟಿನಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೇಷ್ಮೆ ಉದ್ದಿಮೆಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಕೆ. ಸಿ. ನಾರಾಯಣಗೌಡ ಅವರು ಭರವಸೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ಕರೆದು ಉದ್ದಿಮೆಯ ಭಾಗಿದಾರರೆಲ್ಲರ ತೊಂದರೆ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<p>ತಮ್ಮನ್ನು ಭೇಟಿಯಾಗಿ ಅಹವಾಲು ಸಲ್ಲಿಸಿದ ಸಿಲ್ಕ್ ಅಸೋಸಿಯೇಷನ್ ಆಫ್ ಇಂಡಿಯಾದ ನಿಯೋಗಕ್ಕೆ ಸಚಿವರು ಈ ವಾಗ್ದಾನ ನೀಡಿದ್ದಾರೆ.</p>.<p>ಉತ್ಪಾದನೆಯಾದ ರೇಷ್ಮೆ ಮಾರಾಟಗೊಳ್ಳದೆ ಇಡೀ ಉದ್ದಿಮೆ ಬಿಕ್ಕಟ್ಟು ಎದುರಿಸುತ್ತಿದೆ. ಉದ್ದಿಮೆ ನೆಚ್ಚಿಕೊಂಡಿರುವ ಲಕ್ಷಾಂತರ ಕುಟುಂಬಗಳು ಬೀದಿಗೆ ಬಿದ್ದಿವೆ. ಹೂ ಬೆಳೆಗಾರರಿಗೆ ಘೋಷಿಸಿದ ನೆರವಿನ ಮಾದರಿಯಲ್ಲಿ ರೇಷ್ಮೆ ಬೆಳೆಗಾರರಿಗೂ ಹಣಕಾಸಿನ ಕೊಡುಗೆ ನೀಡಬೇಕು. ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಗೆ ₹ 250 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ರೇಷ್ಮೆ ಮೊಟ್ಟೆ ಉತ್ಪಾದಕರಿಗೆ ಕನಿಷ್ಠ ಬಡ್ಡಿಯ ಸಾಲದ ಸೌಲಭ್ಯ ಕಲ್ಪಿಸಬೇಕು. ಚಾಕಿ ಸಾಕಾಣಿಕೆದಾರರಿಗೆ ಹಣಕಾಸಿನ ನೆರವು ನೀಡಲು ₹ 20 ಕೋಟಿ ಅನುದಾನ ನೀಡಬೇಕು. ರೇಷ್ಮೆ ನೇಕಾರರಿಗೆ ಬ್ಯಾಂಕ್ ಸಾಲ ಕಲ್ಪಿಸಲು ನೆರವಾಗಬೇಕು ಎಂದು ನಿಯೋಗವು ಸಚಿವರಿಗೆ ಮನವಿ ಮಾಡಿಕೊಂಡಿದೆ.</p>.<p>ಅಸೋಸಿಯೇಷನ್ನಿನ ಗೌರವ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಅಧ್ಯಕ್ಷ ವಿ. ಬಾಲಸುಬ್ರಮಣಿಯನ್ ಮತ್ತು ಕಾರ್ಯದರ್ಶಿ ಎಂ. ರಾಮಚಂದ್ರಗೌಡ ಅವರು ನಿಯೋಗದ ನೇತೃತ್ವವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>