ಭಾರತೀಯ ಪುರಾತತ್ವ ಇಲಾಖೆ ಮೊದಲು ಇದಕ್ಕೆ ಅನುಮತಿ ಕೊಟ್ಟಿದ್ದಿಲ್ಲ. ಈಗ ಅನುಮತಿ ಕೊಟ್ಟಿದ್ದರಿಂದ ಕಾಮಗಾರಿ ಆರಂಭವಾಗಿತ್ತು. ಈಗ ಮತ್ತೆ ಶಿಲಾವಶೇಷಗಳು ದೊರಕಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆಂದು ತಿಳಿದಿದೆ. ಈ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿ ಪ್ರಮೋದ ಬಿ. ಅವರನ್ನು ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಲಿಲ್ಲ.