<p><strong>ವಾಷಿಂಗ್ಟನ್</strong>: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊರೊನೋತ್ತರದ ಆರ್ಥಿಕ ಚೇತರಿಕೆ, ಕೋವಿಡ್ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ಪಾತ್ರ ಸೇರಿದಂತೆ ಇನ್ನೂ ಹಲವು ವಿಷಯಗಳ ಕುರಿತು ವಿಶ್ವ ಬ್ಯಾಂಕ್ನ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.</p>.<p>ವಾಷಿಂಗ್ಟನ್ ಡಿಸಿಯಲ್ಲಿ ಇರುವ ವಿಶ್ವಬ್ಯಾಂಕ್ನ ಮುಖ್ಯ ಕಚೇರಿಯಲ್ಲಿ ಡೇವಿಡ್ ಅವರನ್ನು ನಿರ್ಮಾ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋವಿಡ್ನ ಎರಡನೇ ಅಲೆಯನ್ನು ನಿಯಂತ್ರಿಸಲು ಭಾರತ ತೆಗೆದುಕೊಂಡ ಕ್ರಮಗಳು ಹಾಗೂ ಜಾಗತಿಕ ಮಟ್ಟದಲ್ಲಿ ಕೋವಿಡ್ ನಿಯಂತ್ರಿಸಲು ಭಾರತ ವಹಿಸಿದ ಪ್ರಮುಖ ಪಾತ್ರಗಳ ಕುರಿತು ಮಾಹಿತಿ ನೀಡಿದ್ದಾರೆ.</p>.<p>ಅಭಿವೃದ್ಧಿಗಾಗಿ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸಲು ಭಾರತಕ್ಕೆ ಸಾಲ ನೀಡುವ ಅವಕಾಶವನ್ನು ಹೆಚ್ಚಿಸಿರುವ ವಿಶ್ವ ಬ್ಯಾಂಕ್ ಸಮೂಹದ ಉಪಕ್ರಮದ ಬಗ್ಗೆ ನಿರ್ಮಲಾ ಅವರು ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಆರ್ಥಿಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಬಿಕ್ಕಟ್ಟನ್ನು ಒಂದು ಅವಕಾಶವಾಗಿ ಪರಿವರ್ತಿಸಲು ಮತ್ತು ಸದೃಢವಾಗಿ ಹೊರಹೊಮ್ಮಲು ಗಮನಾರ್ಹವಾದ ಸಾಂಸ್ಥಿಕ ಸುಧಾರಣೆಗಳನ್ನು ಸಹ ಭಾರತ ಸರ್ಕಾರವು ತೆಗೆದುಕೊಂಡಿದೆ ಎಂದು ವಿಶ್ವಬ್ಯಾಂಕ್ನ ಅಧ್ಯಕ್ಷರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊರೊನೋತ್ತರದ ಆರ್ಥಿಕ ಚೇತರಿಕೆ, ಕೋವಿಡ್ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ಪಾತ್ರ ಸೇರಿದಂತೆ ಇನ್ನೂ ಹಲವು ವಿಷಯಗಳ ಕುರಿತು ವಿಶ್ವ ಬ್ಯಾಂಕ್ನ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.</p>.<p>ವಾಷಿಂಗ್ಟನ್ ಡಿಸಿಯಲ್ಲಿ ಇರುವ ವಿಶ್ವಬ್ಯಾಂಕ್ನ ಮುಖ್ಯ ಕಚೇರಿಯಲ್ಲಿ ಡೇವಿಡ್ ಅವರನ್ನು ನಿರ್ಮಾ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋವಿಡ್ನ ಎರಡನೇ ಅಲೆಯನ್ನು ನಿಯಂತ್ರಿಸಲು ಭಾರತ ತೆಗೆದುಕೊಂಡ ಕ್ರಮಗಳು ಹಾಗೂ ಜಾಗತಿಕ ಮಟ್ಟದಲ್ಲಿ ಕೋವಿಡ್ ನಿಯಂತ್ರಿಸಲು ಭಾರತ ವಹಿಸಿದ ಪ್ರಮುಖ ಪಾತ್ರಗಳ ಕುರಿತು ಮಾಹಿತಿ ನೀಡಿದ್ದಾರೆ.</p>.<p>ಅಭಿವೃದ್ಧಿಗಾಗಿ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸಲು ಭಾರತಕ್ಕೆ ಸಾಲ ನೀಡುವ ಅವಕಾಶವನ್ನು ಹೆಚ್ಚಿಸಿರುವ ವಿಶ್ವ ಬ್ಯಾಂಕ್ ಸಮೂಹದ ಉಪಕ್ರಮದ ಬಗ್ಗೆ ನಿರ್ಮಲಾ ಅವರು ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಆರ್ಥಿಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಬಿಕ್ಕಟ್ಟನ್ನು ಒಂದು ಅವಕಾಶವಾಗಿ ಪರಿವರ್ತಿಸಲು ಮತ್ತು ಸದೃಢವಾಗಿ ಹೊರಹೊಮ್ಮಲು ಗಮನಾರ್ಹವಾದ ಸಾಂಸ್ಥಿಕ ಸುಧಾರಣೆಗಳನ್ನು ಸಹ ಭಾರತ ಸರ್ಕಾರವು ತೆಗೆದುಕೊಂಡಿದೆ ಎಂದು ವಿಶ್ವಬ್ಯಾಂಕ್ನ ಅಧ್ಯಕ್ಷರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>