ಮಂಗಳೂರು: ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ (ಕೆಐಒಸಿಎಲ್) ಪ್ರಭಾರ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾಗಿ (ಸಿಎಂಡಿ) ಹಣಕಾಸು ನಿರ್ದೇಶಕ ಸ್ವಪ್ನಕುಮಾರ್ ಗೊರೈ ಅವರನ್ನು ನೇಮಿಸಲಾಗಿದೆ. ಹಾಲಿ ಸಿಎಂಡಿ ಎಂ.ವಿ. ಸುಬ್ಬರಾವ್ ಅವರು ಜೂನ್ 30ರಂದು ನಿವೃತ್ತರಾಗಿದ್ದು, ಅವರ ಜಾಗಕ್ಕೆ ಈ ನೇಮಕ ಮಾಡಲಾಗಿದೆ.