ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಕಡಿತ

ನವದೆಹಲಿ: ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಆದಾಯವನ್ನೇ ಹೆಚ್ಚಾಗಿ ನೆಚ್ಚಿಕೊಂಡಿರುವವರಿಗೆ ಕೇಂದ್ರ ಸರ್ಕಾರವು ಭಾರಿ ಪೆಟ್ಟು ನೀಡಿದೆ.
2020–21ರ ಹಣಕಾಸು ವರ್ಷದ ಮೊದಲ (ಏಪ್ರಿಲ್–ಜೂನ್) ತ್ರೈಮಾಸಿಕಕ್ಕೆ ಸುಕನ್ಯಾ ಸಮೃದ್ಧಿ ಯೋಜನೆಯೂ ಸೇರಿದಂತೆ ವಿವಿಧ ಯೋಜನೆಗಳ ಬಡ್ಡಿ ದರದಲ್ಲಿ ಶೇ 1.4ರವರೆಗೂ ಇಳಿಕೆ ಮಾಡಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಬಡ್ಡಿ ದರವನ್ನು ಶೇ 1.2ರಷ್ಟು ಕಡಿಮೆ ಮಾಡಲಾಗಿದೆ. ಉಳಿತಾಯ ಠೇವಣಿ ಬಡ್ಡಿ ದರದಲ್ಲಿ (ಶೇ 4) ಬದಲಾವಣೆ ಮಾಡಲಾಗಿಲ್ಲ.
ಬ್ಯಾಂಕ್ ಠೇವಣಿ ದರಗಳಿಗೆ ಅನುಗುಣವಾಗಿ ಎನ್ಪಿಎಸ್, ಪಿಪಿಎಫ್ ಒಳಗೊಂಡು ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಕಡಿತ ಮಾಡಲಾಗಿದೆ. ಏಪ್ರಿಲ್ 1ರಿಂದಲೇ ಇದು ಜಾರಿಗೆ ಬರಲಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.