<p><strong>ಮುಂಬೈ:</strong> ವಂಚನೆ ನಡೆಯದಂತೆ ನೋಡಿಕೊಳ್ಳುವ ಜತೆಗೆ ವಂಚನೆ ನಡೆಯಲಿದೆ ಎನ್ನುವ ಸುಳಿವು ಕಂಡುಕೊಂಡು ಆರಂಭದಲ್ಲಿಯೇ ಅದನ್ನು ಹತ್ತಿಕ್ಕಬೇಕು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬ್ಯಾಂಕ್ಗಳಿಗೆ ಸಲಹೆ ನೀಡಿದ್ದಾರೆ.</p>.<p>ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಆಯೋಜಿಸಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, ‘ಬ್ಯಾಂಕಿಂಗ್ ವ್ಯವಸ್ಥೆ ದೃಢ ಮತ್ತು ಸ್ಥಿರವಾಗಿ ಮುಂದುವರಿಯಲಿದೆಯಾದರೂ ಕೋವಿಡ್–19 ಬಿಕ್ಕಟ್ಟಿನಿಂದಾಗಿ ಬ್ಯಾಂಕ್ಗಳು ಬಂಡವಾಳ ನಷ್ಟ ಅನುಭವಿಸುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ.</p>.<p>ಸದ್ಯದ ಪರಿಸ್ಥಿತಿಯಲ್ಲಿ ಸವಾಲುಗಳಿಂದ ದೂರ ಉಳಿದರೆ ತಾವಾಗಿಯೇ ಸೋಲು ಒಪ್ಪಿಕೊಂಡಂತೆ ಆಗಲಿದೆ ಎಂದು ಹೇಳಿದ್ದಾರೆ. ಬ್ಯಾಂಕ್ಗಳ ಸಾಲ ನೀಡಿಕೆ ಪ್ರಮಾಣವು ಶೇಕಡ 6ಕ್ಕಿಂತಲೂ ಕಡಿಮೆ ಇದೆ.</p>.<p>ಆರ್ಬಿಐನ ವಾರ್ಷಿಕ ವರದಿಯ ಪ್ರಕಾರ, 2019–20ರಲ್ಲಿ ಬ್ಯಾಂಕಿಂಗ್ ವಲಯದಲ್ಲಿನ ವಂಚನೆಯ ಮೊತ್ತ ₹ 1.85 ಲಕ್ಷ ಕೋಟಿ.</p>.<p>‘ವಂಚನೆ ನಡೆಯುವುದಕ್ಕೂ ಮೊದಲು ಅದರ ಸುಳಿವು ಕಂಡುಕೊಳ್ಳಲು ಸಾಧ್ಯವಾಗುವ ನಿಟ್ಟಿನಲ್ಲಿ ಬ್ಯಾಂಕ್ಗಳ ಗಂಡಾಂತರ ನಿರ್ವಹಣೆ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕಿದೆ’ ಎಂದು ದಾಸ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಆಡಳಿತ, ಗಂಡಾಂತರ ನಿರ್ವಹಣೆ, ಸೂಕ್ತವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಕುರಿತು ಹೆಚ್ಚಿನ ಗಮನ ನೀಡುವಂತೆ ಬ್ಯಾಂಕ್ಗಳಿಗೆ ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಂಚನೆ ನಡೆಯದಂತೆ ನೋಡಿಕೊಳ್ಳುವ ಜತೆಗೆ ವಂಚನೆ ನಡೆಯಲಿದೆ ಎನ್ನುವ ಸುಳಿವು ಕಂಡುಕೊಂಡು ಆರಂಭದಲ್ಲಿಯೇ ಅದನ್ನು ಹತ್ತಿಕ್ಕಬೇಕು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬ್ಯಾಂಕ್ಗಳಿಗೆ ಸಲಹೆ ನೀಡಿದ್ದಾರೆ.</p>.<p>ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಆಯೋಜಿಸಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, ‘ಬ್ಯಾಂಕಿಂಗ್ ವ್ಯವಸ್ಥೆ ದೃಢ ಮತ್ತು ಸ್ಥಿರವಾಗಿ ಮುಂದುವರಿಯಲಿದೆಯಾದರೂ ಕೋವಿಡ್–19 ಬಿಕ್ಕಟ್ಟಿನಿಂದಾಗಿ ಬ್ಯಾಂಕ್ಗಳು ಬಂಡವಾಳ ನಷ್ಟ ಅನುಭವಿಸುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ.</p>.<p>ಸದ್ಯದ ಪರಿಸ್ಥಿತಿಯಲ್ಲಿ ಸವಾಲುಗಳಿಂದ ದೂರ ಉಳಿದರೆ ತಾವಾಗಿಯೇ ಸೋಲು ಒಪ್ಪಿಕೊಂಡಂತೆ ಆಗಲಿದೆ ಎಂದು ಹೇಳಿದ್ದಾರೆ. ಬ್ಯಾಂಕ್ಗಳ ಸಾಲ ನೀಡಿಕೆ ಪ್ರಮಾಣವು ಶೇಕಡ 6ಕ್ಕಿಂತಲೂ ಕಡಿಮೆ ಇದೆ.</p>.<p>ಆರ್ಬಿಐನ ವಾರ್ಷಿಕ ವರದಿಯ ಪ್ರಕಾರ, 2019–20ರಲ್ಲಿ ಬ್ಯಾಂಕಿಂಗ್ ವಲಯದಲ್ಲಿನ ವಂಚನೆಯ ಮೊತ್ತ ₹ 1.85 ಲಕ್ಷ ಕೋಟಿ.</p>.<p>‘ವಂಚನೆ ನಡೆಯುವುದಕ್ಕೂ ಮೊದಲು ಅದರ ಸುಳಿವು ಕಂಡುಕೊಳ್ಳಲು ಸಾಧ್ಯವಾಗುವ ನಿಟ್ಟಿನಲ್ಲಿ ಬ್ಯಾಂಕ್ಗಳ ಗಂಡಾಂತರ ನಿರ್ವಹಣೆ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕಿದೆ’ ಎಂದು ದಾಸ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಆಡಳಿತ, ಗಂಡಾಂತರ ನಿರ್ವಹಣೆ, ಸೂಕ್ತವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಕುರಿತು ಹೆಚ್ಚಿನ ಗಮನ ನೀಡುವಂತೆ ಬ್ಯಾಂಕ್ಗಳಿಗೆ ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>