<p>ಮುಂಬೈ (ಪಿಟಿಐ): ಮಾರ್ಚ್ ತ್ರೈಮಾಸಿಕದಲ್ಲಿ ನಿವ್ವಳ ಲಾಭವು ಶೇ 18.9ರಷ್ಟು ಹೆಚ್ಚಳ ಕಂಡಿದ್ದು ₹407 ಕೋಟಿಗೆ ತಲುಪಿದೆ ಎಂದು ಸೌತ್ ಇಂಡಿಯನ್ ಬ್ಯಾಂಕ್ ತಿಳಿಸಿದೆ.</p>.<p>ಹಿಂದಿನ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹342 ಕೋಟಿ ನಿವ್ವಳ ಲಾಭ ಗಳಿಸಿತ್ತು. ‘ಸಾಲ ನೀಡಿಕೆಯನ್ನು ವಿವಿಧ ವಲಯಗಳಿಗೆ ವಿಸ್ತರಿಸಿರುವ ಪರಿಣಾಮವಾಗಿ ನಿವ್ವಳ ಬಡ್ಡಿ ವರಮಾನವು ಅಂದಾಜು ಶೇ 4ರಷ್ಟು ಜಾಸ್ತಿ ಆಗಿದೆ’ ಎಂದು ಬ್ಯಾಂಕ್ನ ಎಂ.ಡಿ ಹಾಗೂ ಸಿಇಒ ಪಿ.ಆರ್. ಶೇಷಾದ್ರಿ ಹೇಳಿದ್ದಾರೆ.</p>.<p>ಮಾರ್ಚ್ ತ್ರೈಮಾಸಿಕದಲ್ಲಿ ಬ್ಯಾಂಕ್ನ ಒಟ್ಟು ವರಮಾನವು ₹2,945 ಕೋಟಿ ಆಗಿದೆ.</p>.<p>ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ದೀರ್ಘ ಅವಧಿಗೆ ಮುಂದುವರಿದು, ಅಲ್ಲಿ ನೆಲಸಿರುವ ಭಾರತೀಯರು ದೊಡ್ಡ ಸಂಖ್ಯೆಯಲ್ಲಿ ಸ್ವದೇಶಕ್ಕೆ ಮರಳಿದರೆ ದೀರ್ಘಾವಧಿಯ ಸಮಸ್ಯೆಯೊಂದು ಸೃಷ್ಟಿಯಾಗಬಹುದು ಎಂದು ಶೇಷಾದ್ರಿ ಹೇಳಿದ್ದಾರೆ.</p>.<p>ಬ್ಯಾಂಕ್ನ ಆಡಳಿತ ಮಂಡಳಿಯು ಷೇರುದಾರರಿಗೆ ಪ್ರತಿ ಷೇರಿಗೆ ₹0.45ರಷ್ಟು ಲಾಭಾಂಶ ನೀಡಲು ಶಿಫಾರಸು ಮಾಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-51-1021563613</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ಮಾರ್ಚ್ ತ್ರೈಮಾಸಿಕದಲ್ಲಿ ನಿವ್ವಳ ಲಾಭವು ಶೇ 18.9ರಷ್ಟು ಹೆಚ್ಚಳ ಕಂಡಿದ್ದು ₹407 ಕೋಟಿಗೆ ತಲುಪಿದೆ ಎಂದು ಸೌತ್ ಇಂಡಿಯನ್ ಬ್ಯಾಂಕ್ ತಿಳಿಸಿದೆ.</p>.<p>ಹಿಂದಿನ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹342 ಕೋಟಿ ನಿವ್ವಳ ಲಾಭ ಗಳಿಸಿತ್ತು. ‘ಸಾಲ ನೀಡಿಕೆಯನ್ನು ವಿವಿಧ ವಲಯಗಳಿಗೆ ವಿಸ್ತರಿಸಿರುವ ಪರಿಣಾಮವಾಗಿ ನಿವ್ವಳ ಬಡ್ಡಿ ವರಮಾನವು ಅಂದಾಜು ಶೇ 4ರಷ್ಟು ಜಾಸ್ತಿ ಆಗಿದೆ’ ಎಂದು ಬ್ಯಾಂಕ್ನ ಎಂ.ಡಿ ಹಾಗೂ ಸಿಇಒ ಪಿ.ಆರ್. ಶೇಷಾದ್ರಿ ಹೇಳಿದ್ದಾರೆ.</p>.<p>ಮಾರ್ಚ್ ತ್ರೈಮಾಸಿಕದಲ್ಲಿ ಬ್ಯಾಂಕ್ನ ಒಟ್ಟು ವರಮಾನವು ₹2,945 ಕೋಟಿ ಆಗಿದೆ.</p>.<p>ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ದೀರ್ಘ ಅವಧಿಗೆ ಮುಂದುವರಿದು, ಅಲ್ಲಿ ನೆಲಸಿರುವ ಭಾರತೀಯರು ದೊಡ್ಡ ಸಂಖ್ಯೆಯಲ್ಲಿ ಸ್ವದೇಶಕ್ಕೆ ಮರಳಿದರೆ ದೀರ್ಘಾವಧಿಯ ಸಮಸ್ಯೆಯೊಂದು ಸೃಷ್ಟಿಯಾಗಬಹುದು ಎಂದು ಶೇಷಾದ್ರಿ ಹೇಳಿದ್ದಾರೆ.</p>.<p>ಬ್ಯಾಂಕ್ನ ಆಡಳಿತ ಮಂಡಳಿಯು ಷೇರುದಾರರಿಗೆ ಪ್ರತಿ ಷೇರಿಗೆ ₹0.45ರಷ್ಟು ಲಾಭಾಂಶ ನೀಡಲು ಶಿಫಾರಸು ಮಾಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-51-1021563613</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>