ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಸ್ಥಿರತೆಗೆ ಉತ್ತೇಜನಾ ಕೊಡುಗೆ

ಸಿಐಐ, ಎಫ್‌ಕೆಸಿಸಿಐ ವಿಶ್ಲೇಷಣೆ
Last Updated 25 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಆರ್ಥಿಕತೆಯ ವಿವಿಧ ವಲಯಗಳಿಗೆ ಬಹುಬಗೆಯ ಕೊಡುಗೆಗಳನ್ನು ಪ್ರಕಟಿಸಿರುವುದರಿಂದ ಬೆಳವಣಿಗೆಯ ಹೊಸ ಶಕೆಗೆ ನಾಂದಿಯಾಗಲಿದೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ವಿಶ್ಲೇಷಿಸಿದೆ.

ವಿಶ್ವದ ಎರಡು ಅತಿದೊಡ್ಡ ಆರ್ಥಿಕತೆಗಳಾದ ಅಮೆರಿಕ ಮತ್ತು ಚೀನಾ ಮಧ್ಯೆ ವಾಣಿಜ್ಯ ಸಮರ ನಡೆಯುತ್ತಿರುವ ಮತ್ತು ಅಂತರರಾಷ್ಟ್ರೀಯ ವ್ಯಾಪಾರ ನಿಧಾನಗೊಂಡಿರುವ ಸಂದರ್ಭದಲ್ಲಿ ಪ್ರಕಟಗೊಂಡಿರುವ ಈ ಕೊಡುಗೆಗಳು ಆರ್ಥಿಕತೆಯಲ್ಲಿ ಸ್ಥಿರತೆ ಮೂಡಿಸಲಿವೆ. ಮುಂಬರುವ ತಿಂಗಳುಗಳಲ್ಲಿ ಆರ್ಥಿಕತೆ ಚೇತರಿಸಿಕೊಳ್ಳಲಿದೆ ಎಂದು ಸಿಐಐ ಆಶಾವಾದ ವ್ಯಕ್ತಪಡಿಸಿದೆ.

‘ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆರು ಆಯಾಮಗಳ ಕೊಡುಗೆಗಳನ್ನು ಪ್ರಕಟಿಸಿರುವುದು ಪ್ರಶಂಸನೀಯವಾಗಿದೆ’ ಎಂದು ಸಿಐಐ ಅಧ್ಯಕ್ಷ ವಿಕ್ರಂ ಕಿರ್ಲೋಸ್ಕರ್‌ ಹೇಳಿದ್ದಾರೆ. ‘ಹಲವಾರು ಉಪಕ್ರಮಗಳು ಬಂಡವಾಳ ಹೂಡಿಕೆ ಉತ್ತೇಜಿಸಲಿವೆ’ ಎಂದು ‘ಸಿಐಐ’ನ ನಿಯೋಜಿತ ಅಧ್ಯಕ್ಷ ಉದಯ್‌ ಕೋಟಕ್‌ ಹೇಳಿದ್ದಾರೆ.

‘ದೇಶಿ ಕೈಗಾರಿಕೋದ್ಯಮಿಗಳ ಆತಂಕ ದೂರ ಮಾಡಿರುವ ಸಚಿವೆ ನಿರ್ಮಲಾ ಅವರು, ಉದ್ಯಮಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೊಡುಗೆ ಪ್ರಕಟಿಸಿದ್ದಾರೆ. ಮಂದಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆಯ ಚೇತರಿಕೆಗೆ ಈ ಕೊಡುಗೆಗಳು ಭರವಸೆದಾಯಕವಾಗಿವೆ’ ಎಂದು ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ (ಎಫ್‌ಕೆಸಿಸಿಐ) ಅಧ್ಯಕ್ಷ ಸಿ. ಆರ್‌. ಜನಾರ್ಧನ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT